8:19 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಬಿಜೆಪಿ ಸೇರ್ಪಡೆ ಸಮಯದಲ್ಲಿ ಹಣದ ಆಫರ್ ಇಟ್ಟಿದ್ದು ನಿಜ:  ಶಾಸಕ ಶ್ರೀಮಂತ ಪಾಟೀಲ್ ಸ್ಫೋಟಕ ಮಾಹಿತಿ

11/09/2021, 21:44

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರುವಾಗ ನನಗೆ ಹಣದ ಆಫರ್ ನೀಡಿದ್ದರು.ಆದರೆ ನಾನು ಯಾವುದೇ ಹಣ ಬೇಡಿಕೆ ಇಡದೆ, ಸಮಾಜದ ಸೇವೆಗೆ ನನಗೆ ಒಳ್ಳೆಯ ಸ್ಥಾನಮಾನ ನೀಡುವಂತೆ ಕೇಳಿಕೊಂಡಿದ್ದೆ ಎಂದು ಮಾಜಿ ಸಚಿವ ಹಾಗೂ ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. 

ಅವರು ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಕಾಮಗಾರಿಯನ್ನು ಉದ್ಘಾಟಿಸಿ ಮಾದ್ಯಮ ಜತೆ ಮಾತನಾಡಿದರು.

ಬಿಜೆಪಿ ಪಕ್ಷ ಸೇರುವಾಗ ನನಗೆ ಹಣದ ಆಫರ್ ಇಟ್ಟಿದ್ದು ನಿಜ. ಆದರೆ ನಾನು ಯಾವುದೇ ಒಂದು ದುಡ್ಡನ್ನು (ಹಣ) ತೆಗೆದುಕೊಳ್ಳದೆ, ನನಗೆ ಒಳ್ಳೆಯ ಸ್ಥಾನಮಾನ ನೀಡುವಂತೆ ಕೇಳಿಕೊಂಡಿದ್ದೆ. ಅದರಂತೆ ಅವರು ನನಗೆ ಸಚಿವ ಸ್ಥಾನ ನೀಡಿದ್ದರು. ಸದ್ಯ ಸಚಿವ ಸ್ಥಾನದಿಂದ ಕೈಬಿಟ್ಟಿದ್ದಾರೆ. ಮುಂಬರುವ ದಿನದಲ್ಲಿ ಮತ್ತೆ ಸಚಿವ ಸ್ಥಾನ ಕೊಡುತ್ತಾರೆ ಎಂದು ಭರವಸೆ ಇದೆ ಎಂದು ಪಾಟೀಲ್ ಹೇಳಿದರು.

ಈಗ ಸಚಿವ ಸ್ಥಾನ ಸಿಕ್ಕಿಲ್ಲ. ಈ ವಿಚಾರದಲ್ಲಿ ಹಿರಿಯ ನಾಯಕರೊಟ್ಟಿಗೆ ಚರ್ಚೆ ಮಾಡಿದ್ದೇನೆ. ನನಗೆ ಸಚಿವ ಸ್ಥಾನ ನಿಡುವಂತೆ ಮರಾಠ ಸಮುದಾಯ ಕೂಡ ಒತ್ತಾಯ ಮಾಡುತ್ತಿದೆ. ವರಿಷ್ಠರು ಮುಂಬರುವ ಸಚಿವ ಸಂಪುಟ ವಿಸ್ತರಣೆ ಸಮಯದಲ್ಲಿ ನನಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು