4:30 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್ ಸವಾಲು

28/04/2026, 22:29

ಗಣೇಶ್ ಇನಾಂದಾರ್ ಬಳ್ಳಾರಿ

info.reporterkarnataka@gmail.com

ಬಿಜೆಪಿ ನೇತೃತ್ವದ ಕೇಂದ್ರದ ಎನ್ ಡಿ ಎ ಸರ್ಕಾರ ದೇಶದಲ್ಲಿ ಮಹಿಳಾ ಮೀಸಲಾತಿ ಕುರಿತು ಸುಳ್ಳು ಆರೋಪ ಮಾಡುವ ಬದಲು ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲು ಮುಂದಾಗಲಿ ಎಂದು ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸವಾಲು ಎಸೆದಿದ್ದಾರೆ.
ಭಾನುವಾರ ಅವರು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತಾಳೂರು ಗ್ರಾಮದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಬಿಜೆಪಿ ಮಹಿಳಾ ಮೀಸಲಾತಿ ಜೊತೆಗೆ ಕ್ಷೇತ್ರಗಳ ಡಿ ಲಿಮಿಟೇಷನ್ ಲಿಂಕ್ ಯಾಕೆ ಮಾಡುತ್ತದೆ ತಮ್ಮ ಪಕ್ಷದಿಂದ ನೇರವಾಗಿ ಮಹಿಳೆಯರಿಗೆ ಶೇ 30ರಷ್ಟು ಮೀಸಲಾತಿ ನೀಡಲಿ ಎಂದು ತಿಳಿಸಿದರು.
ಪ್ರಧಾನಿ ಮೋದಿಯವರು ಮತ್ತು ಅವರ ಸಚಿವ ಸಂಪುಟದ ಸದಸ್ಯರು ಚುನಾವಣೆಯ ಹುಚ್ಚಿನಲ್ಲಿ ಇದ್ದಾರೆ. ದೇಶದಲ್ಲಿ ಮಹಿಳಾ ಮೀಸಲಾತಿ ತರುವ ಕುರಿತು 2014, 19 ಮತ್ತು 24ರಲ್ಲಿ ಬಿಜೆಪಿಯವರೇ ಮಾತಾಡಿದ್ದಾರೆ ಎಂದ ಅವರು ಪ್ರಧಾನಿ ಅವರು ತಮಿಳುನಾಡಿನಲ್ಲಿ ಚುನಾವಣೆ ಪ್ರಚಾರದಲ್ಲಿ ಕಪ್ಪು ಬಟ್ಟೆ ಧರಿಸಿದರೆ ಬೇರೆ ರಾಜ್ಯಕ್ಕೆ ಹೋದಾಗ ಮತ್ತೊಂದು ರೀತಿಯಲ್ಲಿ ಬಣ್ಣ ಬದಲಿಸುತ್ತಿದ್ದಾರೆ ಇದು ಏಕೆ ಎಂದು ಪ್ರಶ್ನಿಸಿದರು.
ಅಮೇರಿಕಾ ಅಧ್ಯಕ್ಷ ಟ್ರಂಪ್ ಭಾರತ ಒಂದು ನರಕ
ಎಂದ ಹೇಳಿಕೆಗೆ ತಾವೇ ದೇಶಾಭಿಮಾನಿಗಳು, ರಾಷ್ಟ್ರಭಕ್ತರು ಎಂಬಂತೆ ಬಿಂಬಿಸುವ ಬಿಜೆಪಿಯ ಎಲ್ಲ ಸದಸ್ಯರು ಮೌನವಾಗಿರುವುದು ಆಶ್ಚರ್ಯ ತಂದಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು