8:07 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಬಿಜೆಪಿ ಟಿಕೆಟ್ ಕೈತಪ್ಪಿದರೂ ಕಮಲ ಹಿಡಿದ ಸಂಸದೆ ಸುಮಲತಾ: ಕೇಸರಿ ಪಕ್ಷಕ್ಕೆ ಅಧಿಕೃತ ಸೇರ್ಪಡೆ

05/04/2024, 17:30

ಬೆಂಗಳೂರು(reporterkarnataka.com): ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್‌ ಅವರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕೇಸರಿ ಪಕ್ಷ ಸೇರ್ಪಡೆಗೊಂಡರು.


ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸುಮಲತಾ ಅವರಿಗೆ ಬಿಜೆಪಿ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು. ಮಾಜಿ ಸಂಸದರಾದ ಎಸ್.‌ ಶಿವರಾಮನಗೌಡ, ಮಾಜಿ ಕ್ರಿಕೆಟಿಗ ದೊಡ್ಡಗಣೇಶ್‌, ಮುಖಂಡರಾದ ಹರ್ಷ ಗೌಡ,ಗಾಯತ್ರಿ ಜಿ. ತಿಮ್ಮಾರೆಡ್ಡಿ ಗೌಡ, ಶ್ರೀನಿವಾಸ್‌, ತುಕಾರಾಮ್‌ ಗೌಡ ಸೇರಿದಂತೆ ಅವರ ಬೆಂಬಲಿಗರು ಕೂಡ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ, ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿ ಡಾ. ರಾಧಾ ಮೋಹನ್‌ದಾಸ್‌ ಅಗರ್ವಾಲ್‌, ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌, ಮಾಜಿ ಸಚಿವ ಸಿ. ಟಿ. ರವಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್‌ ಜಿ. ವಿ., ಪ್ರಮುಖರಾದ ಜನಾ‌ರ್ಧನ್‌ ರೆಡ್ಡಿ, ರಾಜ್ಯ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು