10:13 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಬಿಜೆಪಿ ಟಿಕೆಟ್ ಕೈತಪ್ಪಿದರೂ ಕಮಲ ಹಿಡಿದ ಸಂಸದೆ ಸುಮಲತಾ: ಕೇಸರಿ ಪಕ್ಷಕ್ಕೆ ಅಧಿಕೃತ ಸೇರ್ಪಡೆ

05/04/2024, 17:30

ಬೆಂಗಳೂರು(reporterkarnataka.com): ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್‌ ಅವರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕೇಸರಿ ಪಕ್ಷ ಸೇರ್ಪಡೆಗೊಂಡರು.


ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸುಮಲತಾ ಅವರಿಗೆ ಬಿಜೆಪಿ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು. ಮಾಜಿ ಸಂಸದರಾದ ಎಸ್.‌ ಶಿವರಾಮನಗೌಡ, ಮಾಜಿ ಕ್ರಿಕೆಟಿಗ ದೊಡ್ಡಗಣೇಶ್‌, ಮುಖಂಡರಾದ ಹರ್ಷ ಗೌಡ,ಗಾಯತ್ರಿ ಜಿ. ತಿಮ್ಮಾರೆಡ್ಡಿ ಗೌಡ, ಶ್ರೀನಿವಾಸ್‌, ತುಕಾರಾಮ್‌ ಗೌಡ ಸೇರಿದಂತೆ ಅವರ ಬೆಂಬಲಿಗರು ಕೂಡ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ, ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿ ಡಾ. ರಾಧಾ ಮೋಹನ್‌ದಾಸ್‌ ಅಗರ್ವಾಲ್‌, ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌, ಮಾಜಿ ಸಚಿವ ಸಿ. ಟಿ. ರವಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್‌ ಜಿ. ವಿ., ಪ್ರಮುಖರಾದ ಜನಾ‌ರ್ಧನ್‌ ರೆಡ್ಡಿ, ರಾಜ್ಯ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು