8:15 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಗೆ 7 ಕೋಟಿ ರೂ. ವಂಚನೆ: ಪ್ರಖರ ಭಾಷಣಗಾರ್ತಿ ಚೈತ್ರಾ ಕುಂದಾಪುರ ಬಂಧನ

13/09/2023, 01:12

ಉಡುಪಿ(reporterkarnataka.com): ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದುತ್ವದ ಪ್ರತಿಪಾದಕಿ, ಮಹಾನ್ ಭಾಷಣಗಾರ್ತಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮುಂಬಯಿಯ ಉದ್ಯಮಿಯೊಬ್ಬರಿಗೆ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 7 ಕೋಟಿ ರೂಪಾಯಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಹಾಗೂ ಟೀಮ್ ತಲೆಮರೆಸಿಕೊಂಡಿತ್ತು.
ಇದೀಗ ಪ್ರಕರಣ ಪ್ರಮುಖ ಆರೋಪಿಯಾದ ಚೈತ್ರಾ ಕುಂದಾಪುರ ಅವರನ್ನು ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಹಠಾತ್ ಕಾರ್ಯಾಚರಣೆ ನಡೆಸಿ
ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಚೈತ್ರಾ ಕುಂದಾಪು ಮತ್ತು ಆಕೆಯ ಟೀಮ್
ಉಡುಪಿ ಜಿಲ್ಲೆಯ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಗೆ
ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ 7 ಕೋಟಿ ರೂ. ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಹಿಂದುತ್ವ ಕುರಿತು ಪ್ರಖರ ಭಾಷಣಕಾರ್ತಿಯಾಗಿ ಗುರುತಿಸಿಕೊಂಡಿರುವ ಚೈತ್ರಾ ಕುಂದಾಪುರ, ಟಿಕೆಟ್ ಕೊಡಿಸುವುದಾಗಿ ಬಿಲ್ಲವ ಉದ್ಯಮಿಯಾದ ಗೋವಿಂದ ಬಾಬು ಪೂಜಾರಿ ಅವರನ್ನು ನಂಬಿಸಿದ್ದಳು.ತನಗೆ ಕೇಂದ್ರದ ಹಲವು ಬಿಜೆಪಿ ಹಾಗೂ ಆರೆಸ್ಸೆಸ್ ನಾಯಕರ ಪರಿಚಯವಿದೆ ಎಂದು ಹೇಳಿಕೊಂಡಿದ್ದಳು. ಅಲ್ಲದೆ ಆರ್ ಎಸ್ ಎಸ್ ಪ್ರಮುಖರು ಎಂದು ನಕಲಿ ನಾಯಕರನ್ನು ಸೃಷ್ಟಿ ಮಾಡಿದ್ದಳು. ಮುಗ್ಧರಾದ
ಗೋವಿಂದ ಬಾಬು ಪೂಜಾರಿ ಅವರಿಂದ ಹಂತ ಹಂತವಾಗಿ 7 ಕೋಟಿ ರೂಪಾಯಿ ಸುಲಿಗೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು