11:26 PM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಬಿಜೆಪಿ ಉತ್ತರ ಮಂಡಲ: ಬೂತ್ ವಿಜಯ ಅಭಿಯಾನಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

03/01/2023, 14:30

ಸುರತ್ಕಲ್ (reporter Karnataka.com): ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲದಲ್ಲಿ ಜನವರಿ 2ರಿಂದ ಜನವರಿ 12ರ ವರೆಗೆ ನಡೆಯಲಿರುವ ಬೂತ್ ವಿಜಯ್ ಅಭಿಯಾನಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಅವರು ಕಾವೂರು ಮಹಾಶಕ್ತಿ ಕೇಂದ್ರ-1ರ ಕುಂಜತ್ತಬೈಲ್ ದಕ್ಷಿಣ ಶಕ್ತಿ ಕೇಂದ್ರದ 86ನೇ ಬೂತ್ ನ ಬಿಜೆಪಿ ಕಾರ್ಯಕರ್ತ ಚಂದ್ರಹಾಸ್ ಕುಲಾಲ್ ರವರ ಮನೆಯಲ್ಲಿ ದೀಪ ಪ್ರಜ್ವಲಿಸಿ ಮನೆಯ ಮುಂದೆ ಧ್ವಜವನ್ನು ಹಾರಿಸಿ ಅಭಿಯಾನಕ್ಕೆ ಚಾಲನೆ ನೀಡಿದರು.

ಆ ಬೂತಿನಲ್ಲಿ 25 ಮನೆಗಳಿಗೆ ಪಕ್ಷದ ಧ್ವಜ ಕಟ್ಟುವ ಮೂಲಕ ಅಭಿಯಾನದ ಯಶಸ್ಸಿಗೆ ಕರೆ ನೀಡಿದರು.


ಈ ಸಂದರ್ಭದಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಜಿಲ್ಲಾ ಮಾಧ್ಯಮ ಪ್ರಮುಖ್ ರಂದೀಪ್ ಕಾಂಚನ್, ಮ.ನ.ಪಾ.ಸದಸ್ಯೆ ಶ್ರೀಮತಿ ಸುಮಂಗಲ, ಕಾವೂರು ಮಹಾ ಶಕ್ತಿಕೇಂದ್ರ ಕಾರ್ಯದರ್ಶಿ ಶೀತೆಶ್ ಕೊಂಡೆ, ಶಕ್ತಿ ಕೇಂದ್ರ ಸಾಕ್ಷಾತ್ ಶೆಟ್ಟಿ, ಸುಜಿತ್ ಕುಲಾಲ್, ಬೂತ್ ಅಧ್ಯಕ್ಷರಾದ ಭುಜಂಗ ಕುಲಾಲ್, ಶ್ರವಣ್, ಸನಿಲ್, ದಿಲೀಪ್ ಕುಲಾಲ್, ನವೀನ್ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು