8:46 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಬಿಜೆಪಿಯ ಕೆಲವು ಗದ್ದಾರರಿಂದಲೇ ನನಗೆ ಸೋಲುಂಟಾಯಿತು: ಈಶ್ವರ ಸಿಂಗ್ ಠಾಕೂರ್ ಆಕ್ರೋಶ

14/05/2023, 17:59

ಬೀದರ್(reporterkarnataka.com): ಬಿಜೆಪಿಯ ಕೆಲವು ಗದ್ದಾರರಿಂದಲೇ ತಮಗೆ ಸೋಲುಂಟಾಗಿದೆ ಎಂದು ಬಿಜೆಪಿ ಪಕ್ಷದ ಬೀದರ ಉತ್ತರ ಕ್ಷೇತ್ರದ ಅಭ್ಯರ್ಥಿ ಈಶ್ವರಸಿಂಗ್ ಠಾಕೂರ್ ಅವರು ಆರೋಪಿಸಿದರು.
ಅವರು ಇಂದು ಬೀದರ ನಗರದಲ್ಲಿ ಕರೆದ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದರು.

ತಮ್ಮ ವಿಶ್ವಾಸಕ್ಕೆ ಮತ್ತು ಪಕ್ಷಕ್ಕೆ ದ್ರೋಹ ಬಗೆದು ಮೋಸ ಮಾಡಿರುವ ಬಿಜೆಪಿಯ ಡಿಕೆ ಸಿದ್ರಾಮ್ ಹಾಗೂ ಇತರರು ತಮ್ಮ ಬೆನ್ನಿಗೆ ಚೂರಿ ಹಾಕಿದ್ದಾರೆ. ಮತ್ತು ಅನೇಕ ವಾಮ ಮಾರ್ಗಗಳನ್ನು ಅನುಸರಿಸಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡಿದ್ದಾರೆ. ಅಂತಹ ಮೋಸಗಾರರ ಪಟ್ಟಿ ತಯ್ಯಾರಿಸಿದ್ದು ಪಕ್ಷದ ವರಿಷ್ಠರಿಗೆ ಕಳಿಸಲಿದ್ದು, ಅವರ ವಿರುದ್ಧ ಸೂಕ್ತ ಕ್ರಮಕ್ಕಾಗಿ ಮನವಿ ಮಾಡಿದ್ದೇನೆ ಅಲ್ಲದೇ ಆ ಪಟ್ಟಿ ಶೀಘ್ರವೇ ಬಿಡುಗಡೆ ಮಾಡುವೆ ಎಂದು ತಿಳಿಸಿದರು.
ಚುನಾವಣೆಯಲ್ಲಿ ಈಶ್ವರ್‍ ಸಿಂಗ್ ಠಾಕೂರ್ ಅವರು ಸೈಲೆಂಟ್ ಆಗಿದ್ದಾರೆ. ಮನೆ ಹೊರಗೆ ಬರುತ್ತಿಲ್ಲ ಎಂಬ ಇತ್ಯಾದಿ ಅಪ ಪ್ರಚಾರ ಮಾಡಿ ಸಾಮಾಜಿಕ ಜಾಲತಾಣಗಳ ಮೂಲಕ ಮಿಥ್ಯ ಹೇಳಿಕೆ ನೀಡಿ ನೀಚತನದ ರಾಜಕಾರಣ ಮಾಡಿರುತ್ತಾರೆ ಎಂದು ಅವರು ಆರೋಪಿಸಿದರು.
ಜೆಡಿಎಸ್ ಅಭ್ಯರ್ಥಿ ಈ ಹಿಂದೆ ಎರಡು ಸಲ ಪಕ್ಷದ ಟಿಕೇಟ್ ಪಡೆದು ಸ್ಪರ್ದಿಸಿ ಸೋಲು ಅನುಭವಿಸಿದ್ದುಂಟು. ಅವರು ಪಕ್ಷಾಂತರಗೊಂಡು ಮೋಸಗೈದಿರುವರು ಎಂದ ಅವರು, ಬೀದರ ಕ್ಷೇತ್ರದ ಜನತೆ ತಮಗೆ ಮತ ನೀಡಿ ತಮ್ಮ ಜೊತೆ ಇದ್ದೇವೆ ಎಂದು ಸಾಬಿತು ಪಡಿಸಿದ್ದಾರೆ. ನನಗೆ ಮತದಾನ ಮಾಡಿರುವ ಸುಮಾರು 18 ಸಾವಿರ ಮಹಾ ಜನತೆಗೆ ಚಿರರುಣಿಯಾಗಿರುವೆ ಎಂದರು
ಈ ಕ್ಷಣದಿಂದ ಮುಂಬರುವ ಚುನಾವಣೆ ವರೆಗೆ ಸರ್ವ ಜನಾಂಗದ ಸುಖ ದುಖ:ಗಳಲ್ಲಿ ಭಾಗಿಯಾಗಿ ಜನರ ಆಶೋತ್ತರಗಳಿಗೆ ಸ್ಪಂದಿಸುವೆ. ಅವರ ಪರವಾಗಿ ದಿನದ 24 ತಾಸುಗಳ ಕಾಲ ತಮ್ಮ ಮೊಬೈಲ್ ಚಾಲು ಇಡುವೆ. ಆದರೇ ಈಗಾಗಲೆ ಗೆದ್ದ ಅಭ್ಯರ್ಥಿ ಮತ್ತು ಸೋತ ಅಭ್ಯರ್ಥಿ ತಮ್ಮ ಮೊಬೈಲ್ ಗಳನ್ನು ಸ್ವಿಚ್ ಆಫ್ ಮಾಡಿರುತ್ತಾರೆ. ಹಾಲಿ ಮಂತ್ರಿ ಭಗವಂತ ಖೂಬಾ ಅವರು ತಮ್ಮ ಪರವಾಗಿ ಕೆಲಸ ಮಾಡಲಿಲ್ಲ ಎಂದ ಅವರು ಮುಂಬರುವ ದಿನಗಳಲ್ಲಿ ತಾವು ಬೀದರ ಲೋಕ ಸಭಾ ಕ್ಷೇತ್ರಕ್ಕೆ ಟಿಕೇಟ್ ಕೆಳಲಿದ್ದೇನೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅಶೋಕ ಪಾಟೀಲ್ ಅಲಿಯಾಬಾದ್, ವಿಶ್ವನಾಥ ಉಪ್ಪೆ, ಶಿವರಾಜಸಿಂಗ್ ಠಾಕೂರ್, ಉಮೇಶ ಕಟ್ಮೆ, ಮಹೇಶ್ವರ್ ಸ್ವಾಮಿ, ಅವರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು