1:10 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಿಜೆಪಿಯದ್ದು ಮನೆಯೊಂದು ಆರು ಬಾಗಿಲು ಪರಿಸ್ಥಿತಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಟೀಕೆ

08/07/2023, 18:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರಾಜ್ಯ ಬಿಜೆಪಿಯದ್ದು ಮನೆಯೊಂದು ಆರು ಬಾಗಿಲು ಪರಿಸ್ಥಿತಿ. ವಿಧಾನಸಭೆ ಅಧಿವೇಶನ ಆರಂಭವಾಗಿ ಮೂರು ದಿನಗಳು ಕಳೆದರು ಬಿಜೆಪಿಗೆ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ್ ಸವದಿ ಲೇವಡಿ ಮಾಡಿದರು.
ಅಥಣಿ ತಾಲೂಕಿನ ಹಲ್ಯಾಳ ಗ್ರಾಮ ಕರಿಮಸೂತಿ ನೀರಾವರಿ ಯೋಜನೆಯ ಕಾಲುವೆಗೆ ನೀರು ಹರಿಸಿ ಮಾಧ್ಯಮ ಜತೆ ಅವರು ಮಾತನಾಡಿದರು.


ಬರದಿಂದ ತತ್ತರಿಸಿದ ಜನರಿಗೆ ಖುಷಿ ಹಂಚಿದ ಲಕ್ಷ್ಮಣ್ ಸವದಿ, ಬಿಜೆಪಿ ರಾಷ್ಟ್ರೀಯ ಪಕ್ಷ ವಿದ್ದರೂ ವಿಪಕ್ಷ ನಾಯಕನ ಕೊರತೆ ಎದುರಿಸುತ್ತಿದೆ.
ಬಿಜೆಪಿ ಪಕ್ಷದಲ್ಲಿ ಒಗ್ಗಟ್ಟಿಲ್ಲದ್ದು ಅದರ ಹೀನಾಯ ಸೋಲಿಗೆ ಕಾರಣ ಎಂದರು.
ಸಿದ್ದರಾಮಯ್ಯ ಬಜೆಟ್ ಸರ್ವರಿಗೂ ಸಮಪಾಲು ಸಮಬಾಳು ನೀಡುವಂತದ್ದು.
ನೀರಾವರಿಗೂ ಹೆಚ್ಚಿನ ಕೊಡುಗೆ ನೀಡಲಾಗಿದೆ. ಅಥಣಿ ಹಾಗೂ ಕಾಗವಾಡ ತಾಲೂಕಿನ ನೀರಾವರಿ ಯೋಜನೆಗೆ ಹೆಚ್ಚಿನ ಒಲವು ನೀಡುವ ಭರವಸೆ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ 30 ಸಾವಿರ ಕೋಟಿ ಬೆಳೆ ಸಾಲ ಕೊಡುವ ಭರವಸೆಯನ್ನು ಶಾಸಕ ಲಕ್ಷ್ಮಣ್ ಸವದಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು