ಇತ್ತೀಚಿನ ಸುದ್ದಿ
ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಿಲ್ಲ; ಬಡವರಿಗೆ ಆರ್ಥಿಕ ಸಬಲತೆ ನೀಡುವುದೇ ಅಭಿವೃದ್ಧಿ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ
21/05/2024, 20:28

ಮಂಗಳೂರು(reporterkarnataka.com): ಬಡವರಿಗೆ ಆರ್ಥಿಕವಾಗಿ ಸಬಲತೆ ನೀಡುವುದೇ ಅಭಿವೃದ್ಧಿ ಆಗಿದೆ. ಅಭಿವೃದ್ಧಿ ಶೂನ್ಯ, ಅಭಿವೃದ್ಧಿ ಶೂನ್ಯ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶಕ್ಕೆ ಬರೀ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು, ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ಬಂದರೆ ಮಾತ್ರ ಸ್ವಾತಂತ್ರ್ಯ ಬಂದಂತೆ ಎಂದು ಡಾ. ಅಂಬೇಡ್ಕರ್ ಹೇಳಿದ್ದರು ಎಂದು ಮುಖ್ಯಮಂತ್ರಿ ನೆನಪಿಸಿಕೊಂಡರು.
ಬಿಜೆಪಿ ನಾಯಕರಿಗೆ ಸುಳ್ಳು ಹೇಳುವುದು ಚಾಳಿಯಾಗಿದೆ. ಅವರ ಹೇಳಿಕೆಯಲ್ಲಿ ಹುರುಳಿಲ್ಲ. ಅವರು ಬಜೆಟ್ ಓದುವುದಿಲ್ಲ ಎಂದು ಎಂದು ಸಿದ್ದರಾಮಯ್ಯ ನುಡಿದರು.
ಗ್ಯಾರೆಂಟಿ ಯೋಜನೆಗಳನ್ನು ಸೇರಿಸಿ 1.20 ಲಕ್ಷ ಕೋಟಿ ಬಜೆಟ್ ಕೊಟ್ಟಿದ್ದೇವೆ. ಈ ಹಿಂದೆ ನೀರಾವರಿಗೆ 16 ಸಾವಿರ ಕೋಟಿ ರೂ. ಇಡಲಾಗುತ್ತಿತ್ತು. ಈ ವರ್ಷ 18 ಸಾವಿರ ಕೋಟಿ ರೂ. ಇಟ್ಟಿದ್ದೇವೆ. ನಾವು ಏನು ಮಾಡಿಲ್ಲ ಎಂದು ಬಿಜೆಪಿಯವರು ಹೇಳುವುದೆಂದರೆ ಏನು? ಎಂದು ಪ್ರಶ್ನಿಸಿದರು.