1:13 PM Sunday8 - February 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7…

ಇತ್ತೀಚಿನ ಸುದ್ದಿ

ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಿಲ್ಲ; ಬಡವರಿಗೆ ಆರ್ಥಿಕ ಸಬಲತೆ ನೀಡುವುದೇ ಅಭಿವೃದ್ಧಿ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ

21/05/2024, 20:28

ಮಂಗಳೂರು(reporterkarnataka.com): ಬಡವರಿಗೆ ಆರ್ಥಿಕವಾಗಿ ಸಬಲತೆ ನೀಡುವುದೇ ಅಭಿವೃದ್ಧಿ ಆಗಿದೆ. ಅಭಿವೃದ್ಧಿ ಶೂನ್ಯ, ಅಭಿವೃದ್ಧಿ ಶೂನ್ಯ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶಕ್ಕೆ ಬರೀ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು, ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ಬಂದರೆ ಮಾತ್ರ ಸ್ವಾತಂತ್ರ್ಯ ಬಂದಂತೆ ಎಂದು ಡಾ. ಅಂಬೇಡ್ಕರ್ ಹೇಳಿದ್ದರು ಎಂದು ಮುಖ್ಯಮಂತ್ರಿ ನೆನಪಿಸಿಕೊಂಡರು.
ಬಿಜೆಪಿ ನಾಯಕರಿಗೆ ಸುಳ್ಳು ಹೇಳುವುದು ಚಾಳಿಯಾಗಿದೆ. ಅವರ ಹೇಳಿಕೆಯಲ್ಲಿ ಹುರುಳಿಲ್ಲ. ಅವರು ಬಜೆಟ್ ಓದುವುದಿಲ್ಲ ಎಂದು ಎಂದು ಸಿದ್ದರಾಮಯ್ಯ ನುಡಿದರು.

ಗ್ಯಾರೆಂಟಿ ಯೋಜನೆಗಳನ್ನು ಸೇರಿಸಿ 1.20 ಲಕ್ಷ ಕೋಟಿ ಬಜೆಟ್ ಕೊಟ್ಟಿದ್ದೇವೆ. ಈ ಹಿಂದೆ ನೀರಾವರಿಗೆ 16 ಸಾವಿರ ಕೋಟಿ ರೂ. ಇಡಲಾಗುತ್ತಿತ್ತು. ಈ ವರ್ಷ 18 ಸಾವಿರ ಕೋಟಿ ರೂ. ಇಟ್ಟಿದ್ದೇವೆ. ನಾವು ಏನು ಮಾಡಿಲ್ಲ ಎಂದು ಬಿಜೆಪಿಯವರು ಹೇಳುವುದೆಂದರೆ ಏನು? ಎಂದು ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು