3:57 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಿಲ್ಲ; ಬಡವರಿಗೆ ಆರ್ಥಿಕ ಸಬಲತೆ ನೀಡುವುದೇ ಅಭಿವೃದ್ಧಿ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ

21/05/2024, 20:28

ಮಂಗಳೂರು(reporterkarnataka.com): ಬಡವರಿಗೆ ಆರ್ಥಿಕವಾಗಿ ಸಬಲತೆ ನೀಡುವುದೇ ಅಭಿವೃದ್ಧಿ ಆಗಿದೆ. ಅಭಿವೃದ್ಧಿ ಶೂನ್ಯ, ಅಭಿವೃದ್ಧಿ ಶೂನ್ಯ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶಕ್ಕೆ ಬರೀ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು, ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ಬಂದರೆ ಮಾತ್ರ ಸ್ವಾತಂತ್ರ್ಯ ಬಂದಂತೆ ಎಂದು ಡಾ. ಅಂಬೇಡ್ಕರ್ ಹೇಳಿದ್ದರು ಎಂದು ಮುಖ್ಯಮಂತ್ರಿ ನೆನಪಿಸಿಕೊಂಡರು.
ಬಿಜೆಪಿ ನಾಯಕರಿಗೆ ಸುಳ್ಳು ಹೇಳುವುದು ಚಾಳಿಯಾಗಿದೆ. ಅವರ ಹೇಳಿಕೆಯಲ್ಲಿ ಹುರುಳಿಲ್ಲ. ಅವರು ಬಜೆಟ್ ಓದುವುದಿಲ್ಲ ಎಂದು ಎಂದು ಸಿದ್ದರಾಮಯ್ಯ ನುಡಿದರು.

ಗ್ಯಾರೆಂಟಿ ಯೋಜನೆಗಳನ್ನು ಸೇರಿಸಿ 1.20 ಲಕ್ಷ ಕೋಟಿ ಬಜೆಟ್ ಕೊಟ್ಟಿದ್ದೇವೆ. ಈ ಹಿಂದೆ ನೀರಾವರಿಗೆ 16 ಸಾವಿರ ಕೋಟಿ ರೂ. ಇಡಲಾಗುತ್ತಿತ್ತು. ಈ ವರ್ಷ 18 ಸಾವಿರ ಕೋಟಿ ರೂ. ಇಟ್ಟಿದ್ದೇವೆ. ನಾವು ಏನು ಮಾಡಿಲ್ಲ ಎಂದು ಬಿಜೆಪಿಯವರು ಹೇಳುವುದೆಂದರೆ ಏನು? ಎಂದು ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು