3:25 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಬಿಜೆಪಿಯವರಿಗಿಂತ ಪಕ್ಷೇತರರ ಸ್ಪರ್ಧೆ ನಮಗೆ ಸಮಸ್ಯೆಯಾಗಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

26/11/2021, 11:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ವಿಧಾನ ಪರಿಷತ್ ಚುಣಾವಣೆಯಲ್ಲಿ ಬಿಜೆಪಿಗಿಂತ ನಮಗೆ ಪಕ್ಷೇತರ ಸಮಸ್ಯೆ ಬಹಳವಾಗಿದೆ. ಈ ಪಕ್ಷೇತರ ಅಭ್ಯರ್ಥಿ ಸ್ಪರ್ಧಿಸುವುದರಿಂದ ಎರಡೂ ಪಕ್ಷದವರಿಗೆ ಗೊಂದಲವಾಗಿದೆ. ಇದರಿಂದ ಎರಡೂ ಪಕ್ಷದವರು‌ ವಿಶೇಷ ತಂತ್ರಗಳನ್ನು ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು.

ಅವರು ಸ್ಥಳೀಯ ಆರ್.ಎಚ್. ಕುಲಕರ್ಣಿ ಸಭಾ ಭವನದಲ್ಲಿ ಹಮ್ಮಿಕೊಂಡ ವಿಧಾನ ಪರಿಷತ್ ಚುಣಾವಣೆ ಕಾಂಗ್ರೇಸ್ ಪಕ್ಷದ ಅಧಿಕೃತ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರ ಪ್ರಚಾರಾರ್ಥ ಅಥಣಿ ಹಾಗೂ ಕಾಗವಾಡ ಮತಕ್ಷೇತ್ರದ ಗ್ರಾಮ ಪಂಚಾಯತ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.

ರಮೇಶ ಜಾರಕಿಹೊಳಿ ಅವರು ಚುಣಾವಣೆಗಾಗಿ ಮಾತ್ರ ಸೀಮಿತವಾದ ವ್ಯಕ್ತಿ ಹೊರತು ಜನಸಾಮಾನ್ಯರ ಕಷ್ಟಗಳಿಗೆ ಬಂದವರಲ್ಲ, ಈ ಹಿಂದೆ ನಡೆದ ವಿಧಾನ‌ಪರಿಷತ್  ಚುಣಾವಣೆಯಲ್ಲಿ ನಮ್ಮ‌ಎದುರಾಳಿ ಯಾರು ಎಂದು ಗೊತ್ತಿರದೆ ನಮ್ಮವರಿಂದಲೇ ನಾವು ಸೋತಿದ್ವಿ‌. ಆದರೆ ಈ ಚುಣಾವಣೆಯಲ್ಲಿ ನಮ್ಮ ಎದುರಾಳಿ ಸ್ಪಷ್ಟವಾಗಿ ಗೊತ್ತಿರುವುದರಿಂದ ಸಂಘಟನೆ ಮಾಡಿ ಗೆಲ್ಲಬೇಕಾಗಿದೆ. ನಮ್ಮ ಪಕ್ಷದ ಅಭ್ಯರ್ಥಿ ಗೆದ್ದರೆ ನಾವು ಸ್ವತಂತ್ರವಾಗಿ ಪಕ್ಷ ಸಂಘಟನೆ ಮಾಡಲು ಸಾಧ್ಯ. ಜಿಲ್ಲೆಯ ಎಲ್ಲರೂ ಸೇರಿಕೊಂಡು ಅವರನ್ನು ಗೆಲ್ಲಿಸಿ ಈ ಹಿಂದೆ ಆದ ಮೋಸವನ್ನು ಮರೆಯಬೇಕಾಗಿದೆ. ಮತದಾರರು ಯಾವುದೇ ಆಮೀಷಕ್ಕೆ ಒಳಗಾಗದೆ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರಿಗೆ ಮತಹಾಕಿ ಎಂದು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು