1:43 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಬಿಜೆಪಿಯವರಿಗಿಂತ ಪಕ್ಷೇತರರ ಸ್ಪರ್ಧೆ ನಮಗೆ ಸಮಸ್ಯೆಯಾಗಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

26/11/2021, 11:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ವಿಧಾನ ಪರಿಷತ್ ಚುಣಾವಣೆಯಲ್ಲಿ ಬಿಜೆಪಿಗಿಂತ ನಮಗೆ ಪಕ್ಷೇತರ ಸಮಸ್ಯೆ ಬಹಳವಾಗಿದೆ. ಈ ಪಕ್ಷೇತರ ಅಭ್ಯರ್ಥಿ ಸ್ಪರ್ಧಿಸುವುದರಿಂದ ಎರಡೂ ಪಕ್ಷದವರಿಗೆ ಗೊಂದಲವಾಗಿದೆ. ಇದರಿಂದ ಎರಡೂ ಪಕ್ಷದವರು‌ ವಿಶೇಷ ತಂತ್ರಗಳನ್ನು ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು.

ಅವರು ಸ್ಥಳೀಯ ಆರ್.ಎಚ್. ಕುಲಕರ್ಣಿ ಸಭಾ ಭವನದಲ್ಲಿ ಹಮ್ಮಿಕೊಂಡ ವಿಧಾನ ಪರಿಷತ್ ಚುಣಾವಣೆ ಕಾಂಗ್ರೇಸ್ ಪಕ್ಷದ ಅಧಿಕೃತ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರ ಪ್ರಚಾರಾರ್ಥ ಅಥಣಿ ಹಾಗೂ ಕಾಗವಾಡ ಮತಕ್ಷೇತ್ರದ ಗ್ರಾಮ ಪಂಚಾಯತ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.

ರಮೇಶ ಜಾರಕಿಹೊಳಿ ಅವರು ಚುಣಾವಣೆಗಾಗಿ ಮಾತ್ರ ಸೀಮಿತವಾದ ವ್ಯಕ್ತಿ ಹೊರತು ಜನಸಾಮಾನ್ಯರ ಕಷ್ಟಗಳಿಗೆ ಬಂದವರಲ್ಲ, ಈ ಹಿಂದೆ ನಡೆದ ವಿಧಾನ‌ಪರಿಷತ್  ಚುಣಾವಣೆಯಲ್ಲಿ ನಮ್ಮ‌ಎದುರಾಳಿ ಯಾರು ಎಂದು ಗೊತ್ತಿರದೆ ನಮ್ಮವರಿಂದಲೇ ನಾವು ಸೋತಿದ್ವಿ‌. ಆದರೆ ಈ ಚುಣಾವಣೆಯಲ್ಲಿ ನಮ್ಮ ಎದುರಾಳಿ ಸ್ಪಷ್ಟವಾಗಿ ಗೊತ್ತಿರುವುದರಿಂದ ಸಂಘಟನೆ ಮಾಡಿ ಗೆಲ್ಲಬೇಕಾಗಿದೆ. ನಮ್ಮ ಪಕ್ಷದ ಅಭ್ಯರ್ಥಿ ಗೆದ್ದರೆ ನಾವು ಸ್ವತಂತ್ರವಾಗಿ ಪಕ್ಷ ಸಂಘಟನೆ ಮಾಡಲು ಸಾಧ್ಯ. ಜಿಲ್ಲೆಯ ಎಲ್ಲರೂ ಸೇರಿಕೊಂಡು ಅವರನ್ನು ಗೆಲ್ಲಿಸಿ ಈ ಹಿಂದೆ ಆದ ಮೋಸವನ್ನು ಮರೆಯಬೇಕಾಗಿದೆ. ಮತದಾರರು ಯಾವುದೇ ಆಮೀಷಕ್ಕೆ ಒಳಗಾಗದೆ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರಿಗೆ ಮತಹಾಕಿ ಎಂದು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು