2:16 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಬಿಜೆಪಿಯವರಿಗಿಂತ ಪಕ್ಷೇತರರ ಸ್ಪರ್ಧೆ ನಮಗೆ ಸಮಸ್ಯೆಯಾಗಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

26/11/2021, 11:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ವಿಧಾನ ಪರಿಷತ್ ಚುಣಾವಣೆಯಲ್ಲಿ ಬಿಜೆಪಿಗಿಂತ ನಮಗೆ ಪಕ್ಷೇತರ ಸಮಸ್ಯೆ ಬಹಳವಾಗಿದೆ. ಈ ಪಕ್ಷೇತರ ಅಭ್ಯರ್ಥಿ ಸ್ಪರ್ಧಿಸುವುದರಿಂದ ಎರಡೂ ಪಕ್ಷದವರಿಗೆ ಗೊಂದಲವಾಗಿದೆ. ಇದರಿಂದ ಎರಡೂ ಪಕ್ಷದವರು‌ ವಿಶೇಷ ತಂತ್ರಗಳನ್ನು ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು.

ಅವರು ಸ್ಥಳೀಯ ಆರ್.ಎಚ್. ಕುಲಕರ್ಣಿ ಸಭಾ ಭವನದಲ್ಲಿ ಹಮ್ಮಿಕೊಂಡ ವಿಧಾನ ಪರಿಷತ್ ಚುಣಾವಣೆ ಕಾಂಗ್ರೇಸ್ ಪಕ್ಷದ ಅಧಿಕೃತ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರ ಪ್ರಚಾರಾರ್ಥ ಅಥಣಿ ಹಾಗೂ ಕಾಗವಾಡ ಮತಕ್ಷೇತ್ರದ ಗ್ರಾಮ ಪಂಚಾಯತ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.

ರಮೇಶ ಜಾರಕಿಹೊಳಿ ಅವರು ಚುಣಾವಣೆಗಾಗಿ ಮಾತ್ರ ಸೀಮಿತವಾದ ವ್ಯಕ್ತಿ ಹೊರತು ಜನಸಾಮಾನ್ಯರ ಕಷ್ಟಗಳಿಗೆ ಬಂದವರಲ್ಲ, ಈ ಹಿಂದೆ ನಡೆದ ವಿಧಾನ‌ಪರಿಷತ್  ಚುಣಾವಣೆಯಲ್ಲಿ ನಮ್ಮ‌ಎದುರಾಳಿ ಯಾರು ಎಂದು ಗೊತ್ತಿರದೆ ನಮ್ಮವರಿಂದಲೇ ನಾವು ಸೋತಿದ್ವಿ‌. ಆದರೆ ಈ ಚುಣಾವಣೆಯಲ್ಲಿ ನಮ್ಮ ಎದುರಾಳಿ ಸ್ಪಷ್ಟವಾಗಿ ಗೊತ್ತಿರುವುದರಿಂದ ಸಂಘಟನೆ ಮಾಡಿ ಗೆಲ್ಲಬೇಕಾಗಿದೆ. ನಮ್ಮ ಪಕ್ಷದ ಅಭ್ಯರ್ಥಿ ಗೆದ್ದರೆ ನಾವು ಸ್ವತಂತ್ರವಾಗಿ ಪಕ್ಷ ಸಂಘಟನೆ ಮಾಡಲು ಸಾಧ್ಯ. ಜಿಲ್ಲೆಯ ಎಲ್ಲರೂ ಸೇರಿಕೊಂಡು ಅವರನ್ನು ಗೆಲ್ಲಿಸಿ ಈ ಹಿಂದೆ ಆದ ಮೋಸವನ್ನು ಮರೆಯಬೇಕಾಗಿದೆ. ಮತದಾರರು ಯಾವುದೇ ಆಮೀಷಕ್ಕೆ ಒಳಗಾಗದೆ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರಿಗೆ ಮತಹಾಕಿ ಎಂದು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು