10:20 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಿಂದೆ ಬಿಜೆಪಿ ಯುವಮೋರ್ಚಾ ಕೈವಾಡ: ದ.ಕ. ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್

15/05/2026, 22:19

ಮಂಗಳೂರು(reporterkarnataka.com): ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯದ ವಿರುದ್ಧ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಗರದ ಕದ್ರಿ ಸರ್ಕಲ್‌ನಲ್ಲಿ ನಡೆಯಿತು.
ಈ ಸಂದರ್ಭ ಮಾತನಾಡಿದ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್, ನೀಟ್ ಪರೀಕ್ಷೆಯಂತಹ ದೇಶದ ಮಹತ್ವದ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಅತ್ಯಂತ ಆಘಾತಕಾರಿ. ಕೇಂದ್ರ ಸರ್ಕಾರ ಪರೀಕ್ಷಾ ವ್ಯವಸ್ಥೆಯನ್ನು ಪಾರದರ್ಶಕವಾಗಿ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ಹಗರಣದ ಹಿಂದೆ ಬಿಜೆಪಿ ಯುವ ಮೋರ್ಚಾದ ಸದಸ್ಯರ ಜಾಲ ಸಕ್ರಿಯವಾಗಿದ್ದು, ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಕಳೆದ ಕೆಲವು ವರ್ಷಗಳಿಂದ ವಿವಿಧ ರಾಷ್ಟ್ರೀಯ ಪರೀಕ್ಷೆಗಳಲ್ಲಿ ಪದೇ ಪದೇ ಅಕ್ರಮಗಳು ನಡೆಯುತ್ತಿದ್ದು, ಪರೀಕ್ಷಾ ವ್ಯವಸ್ಥೆಯ ಮೇಲಿನ ಜನರ ನಂಬಿಕೆ ಕುಸಿಯುತ್ತಿದೆ. ದೇಶದ ಜನರಿಗೆ “ಅಚ್ಚೇ ದಿನ್” ಭರವಸೆ ನೀಡಿ ಅಧಿಕಾರಕ್ಕೆ ಬಂದ ಮೋದಿ ಸರ್ಕಾರ, ಕಳೆದ ಹಲವು ವರ್ಷಗಳಲ್ಲಿ ಜನಸಾಮಾನ್ಯರ ಬದುಕನ್ನು ದುಬಾರಿ ಜೀವನದ ಸಂಕಷ್ಟಕ್ಕೆ ತಳ್ಳಿದೆ. ಅದಾನಿ, ಅಂಬಾನಿಗಳಂತಹ ಕಾರ್ಪೊರೇಟ್ ಸಾಮ್ರಾಜ್ಯಗಳಿಗೆ ‘ಅಮೃತಕಾಲ’ವನ್ನೇ ಮೋದಿ ಸರಕಾರ ಧಾರೆ ಎರೆದಿದೆ ಎಂದು ಹೇಳಿದರು.


ಪ್ರತಿಭಟನೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರಾದ ಅಪ್ಪಿ, ಲಾರೆನ್ಸ್ ಡಿಸೋಜಾ, ಸುಹಾನ್ ಆಳ್ವ, ಮುಖಂಡರಾದ ಸುಹೈಲ್ ಕಂದಕ್, ಅಭಿನಂದ್ ಹರೀಶ್, ಬಶೀರ್, ನವಾಝ್ ನರಿಂಗಾನ, ಹಾಶೀರ್ ಪೆರಿಮಾರ್, ಫೈಝಲ್, ಗೋಪಿನಾಥ್, ಹಕೀಂ, ಪೃಥ್ವಿರಾಜ್, ಇಮ್ತಿಯಾಝ್ ಕಲ್ಲಡ್ಕ , ಮಿಥೇಶ್, ರಿತೇಶ್ ಅಂಚನ್, ಸುಮಂಥ್, ಫಯಾಝ್ ಅಮ್ಮೆಮ್ಮಾರ್, ಚಂದ್ರಕಲಾ ಜೋಗಿ, ಸಾರಿಕ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು