11:54 AM Thursday20 - November 2025
ಬ್ರೇಕಿಂಗ್ ನ್ಯೂಸ್
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌…

ಇತ್ತೀಚಿನ ಸುದ್ದಿ

ಸೇವೆ ಮಾಡುವ ಅವಕಾಶದಿಂದ ವಂಚಿತನಾದ ನೋವು ಇದೆ: ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ

25/07/2024, 15:08

ಶಿವು ರಾಠೋಡ ನಾಲತವಾಡ ವಿಜಯಪುರ

info.reporterkarnataka@gmail.com

ಭಯ್ಯಾ ಬಯ್ಯಾ ಬಗಲಮೇ ಚೂರಿ ಎಂದು ನನ್ನನ್ನು ಸೋಲಿಸಿದರು. ನಾನಾರಿಗೂ ಮೋಸ ಮಾಡಿಲ್ಲದಿರುವುದೇ ನನ್ನ ಸಾಧನೆ. ಮೂರು ಬಾರಿ ನಿಮ್ಮ ಪ್ರತಿನಿಧಿಯಾಗಿ ವಿಧಾನಸಭೆ ಪ್ರವೇಶಿಸುವ ಅವಕಾಶವನ್ನು ಕೊಟ್ಟಿದ್ದಿರಿ. ಭಯ್ಯಾ ಬಯ್ಯಾ ಬಗಲಮೇ ಚೂರಿ ಎಂದು ತಿಳಿದವರು ನನ್ನನ್ನು ಸೋಲಿಸಿದರು, ನನಗೆ ಅಧಿಕಾರದ ಆಶೆಯ ಹುಚ್ಚಿಲ್ಲ, ನಾನು ಸೋತಾಗ ಐದು ವರ್ಷಗಳ ನಿಮ್ಮ ಸೇವೆ ಮಾಡುವ ಅವಕಾಶದಿಂದ ವಂಚಿತನಾದೆ ಎಂಬ ನೋವು ಒಂದು ಕ್ಷಣ ಕಾಡಿತು ಎಂದು ಕರ್ನಾಟಕ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.


ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡದ ಸ್ಥಳೀಯ ರತ್ನ ಸಂಗಮ ಮಂಗಲ ಕಾರ್ಯಾಲಯದಲ್ಲಿ ಚಂದ್ರಶೇಖರ ಗಂಗನಗೌಡ್ರ ಗೆಳೆಯರ ಬಳಗದಡಿ ಹಮ್ಮಿಕೊಂಡಿದ್ದ ತಮ್ಮ 55ನೇ ಹುಟ್ಟುಹಬ್ಬ ಹಾಗೂ ಸಮಾಜ ಸೇವಕ ಚಂದ್ರಶೇಖರ ಗಂಗನಗೌಡ ಅವರ 45ನೇ ಹುಟ್ಡುಹಬ್ಬ ಆಚರಣೆಯ ಸಮಾರಂಭದಲ್ಲಿ ಮಾತನಾಡಿದರು.
ಎರಡು ಅಣೆಕಟ್ಟಿನ ನಡುವಿನ ಬಂಗಾರದ ಭೂಮಿಯಿದ್ದು, ಬಂಗಾರದ ಬೆಳೆ ಬೆಳೆ ಬೆಳೆಯಬೇಕು. ಭೂಮಿ ಇದ್ದವನೇ ಸಿರಿವಂತ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
ಇದಕ್ಕೂ ಮೊದಲು ವೀರೇಶ್ವರ ಶರಣರ ಮಹಾಮನೆಯಲ್ಲಿ ಶರಣರಿಗೆ ಹಾಗೂ ಗೋ ಮಾತೆಗೆ ಪೂಜೆ ಸಲ್ಲಿಸಿದರು, ಡಾ.ಬಾಬಾಸಾಹೇಬ್ ಅಂಬೇಡ್ಕರ್, ಶರಣ ವೀರೇಶ್ವರರ, ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣಿ ಮಾಡಿ ಶರಣರ ಮಠದಿಂದ ಮೆರವಣಿಗೆ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ಬಂದರು. ಕೆಂಚಪ್ಪ ಬಿರಾದಾರ, ಎಂ.ಎಸ್.ಪಾಟೀಲ, ಮುತ್ತು ಅಂಗಡಿ, ಮುನ್ನಾಧಣಿ ನಾಡಗೌಡ್ರ, ಗಿರೀಶ್ ಪಾಟೀಲ ಮಾತನಾಡಿದರು.
ರಾಜು ಹಾದಿಮನಿ ಕಾರ್ಯಕ್ತಮ ನಿರೂಪಿಸಿ ವಂದಿಸಿದರು. ಬಿಜೆಪಿ ಮುಖಂಡ ಬಿ.ಎಂ.ತಾಳಿಕೋಟಿ ವಕೀಲರು ಸೇರಿದಂತೆ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು