2:23 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಸೇವೆ ಮಾಡುವ ಅವಕಾಶದಿಂದ ವಂಚಿತನಾದ ನೋವು ಇದೆ: ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ

25/07/2024, 15:08

ಶಿವು ರಾಠೋಡ ನಾಲತವಾಡ ವಿಜಯಪುರ

info.reporterkarnataka@gmail.com

ಭಯ್ಯಾ ಬಯ್ಯಾ ಬಗಲಮೇ ಚೂರಿ ಎಂದು ನನ್ನನ್ನು ಸೋಲಿಸಿದರು. ನಾನಾರಿಗೂ ಮೋಸ ಮಾಡಿಲ್ಲದಿರುವುದೇ ನನ್ನ ಸಾಧನೆ. ಮೂರು ಬಾರಿ ನಿಮ್ಮ ಪ್ರತಿನಿಧಿಯಾಗಿ ವಿಧಾನಸಭೆ ಪ್ರವೇಶಿಸುವ ಅವಕಾಶವನ್ನು ಕೊಟ್ಟಿದ್ದಿರಿ. ಭಯ್ಯಾ ಬಯ್ಯಾ ಬಗಲಮೇ ಚೂರಿ ಎಂದು ತಿಳಿದವರು ನನ್ನನ್ನು ಸೋಲಿಸಿದರು, ನನಗೆ ಅಧಿಕಾರದ ಆಶೆಯ ಹುಚ್ಚಿಲ್ಲ, ನಾನು ಸೋತಾಗ ಐದು ವರ್ಷಗಳ ನಿಮ್ಮ ಸೇವೆ ಮಾಡುವ ಅವಕಾಶದಿಂದ ವಂಚಿತನಾದೆ ಎಂಬ ನೋವು ಒಂದು ಕ್ಷಣ ಕಾಡಿತು ಎಂದು ಕರ್ನಾಟಕ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.


ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡದ ಸ್ಥಳೀಯ ರತ್ನ ಸಂಗಮ ಮಂಗಲ ಕಾರ್ಯಾಲಯದಲ್ಲಿ ಚಂದ್ರಶೇಖರ ಗಂಗನಗೌಡ್ರ ಗೆಳೆಯರ ಬಳಗದಡಿ ಹಮ್ಮಿಕೊಂಡಿದ್ದ ತಮ್ಮ 55ನೇ ಹುಟ್ಟುಹಬ್ಬ ಹಾಗೂ ಸಮಾಜ ಸೇವಕ ಚಂದ್ರಶೇಖರ ಗಂಗನಗೌಡ ಅವರ 45ನೇ ಹುಟ್ಡುಹಬ್ಬ ಆಚರಣೆಯ ಸಮಾರಂಭದಲ್ಲಿ ಮಾತನಾಡಿದರು.
ಎರಡು ಅಣೆಕಟ್ಟಿನ ನಡುವಿನ ಬಂಗಾರದ ಭೂಮಿಯಿದ್ದು, ಬಂಗಾರದ ಬೆಳೆ ಬೆಳೆ ಬೆಳೆಯಬೇಕು. ಭೂಮಿ ಇದ್ದವನೇ ಸಿರಿವಂತ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
ಇದಕ್ಕೂ ಮೊದಲು ವೀರೇಶ್ವರ ಶರಣರ ಮಹಾಮನೆಯಲ್ಲಿ ಶರಣರಿಗೆ ಹಾಗೂ ಗೋ ಮಾತೆಗೆ ಪೂಜೆ ಸಲ್ಲಿಸಿದರು, ಡಾ.ಬಾಬಾಸಾಹೇಬ್ ಅಂಬೇಡ್ಕರ್, ಶರಣ ವೀರೇಶ್ವರರ, ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣಿ ಮಾಡಿ ಶರಣರ ಮಠದಿಂದ ಮೆರವಣಿಗೆ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ಬಂದರು. ಕೆಂಚಪ್ಪ ಬಿರಾದಾರ, ಎಂ.ಎಸ್.ಪಾಟೀಲ, ಮುತ್ತು ಅಂಗಡಿ, ಮುನ್ನಾಧಣಿ ನಾಡಗೌಡ್ರ, ಗಿರೀಶ್ ಪಾಟೀಲ ಮಾತನಾಡಿದರು.
ರಾಜು ಹಾದಿಮನಿ ಕಾರ್ಯಕ್ತಮ ನಿರೂಪಿಸಿ ವಂದಿಸಿದರು. ಬಿಜೆಪಿ ಮುಖಂಡ ಬಿ.ಎಂ.ತಾಳಿಕೋಟಿ ವಕೀಲರು ಸೇರಿದಂತೆ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು