7:13 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಬಿಜೆಪಿಯದ್ದು ದುರುದ್ದೇಶದ ಪ್ರತಿಭಟನೆ; ಕೆಂಪುಕಲ್ಲು ನಿಯಮಾವಳಿ ಸರಳೀಕರಣಕ್ಕೆ ಸಂಫುಟ ಒಪ್ಪಿಗೆ ನೀಡಿದೆ: ದ.ಕ. ಕಾಂಗ್ರೆಸ್

16/09/2025, 18:39

ಮಂಗಳೂರು(reporterkarnataka.com): ಬಿಜೆಪಿ ಕೇವಲ ರಾಜಕೀಯ ದುರುದ್ದೇಶದಿಂದ ಪ್ರತಿಭಟನೆ ನಡೆಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲಿನ ರಾಜಸ್ವ ಧನ ಇಳಿಕೆ ಮತ್ತು ಸರಳ ಮರಳು ನೀತಿ ನಿಯಮಾವಳಿಯನ್ನು ಸರ್ಕಾರ ಈಗಾಗಲೇ ರಚಿಸಿದ್ದು, ಸಚಿವ ಸಂಪುಟದಿಂದ ಒಪ್ಪಿಗೆಯೂ ಸಿಕ್ಕಿದೆ. ಶೀಘ್ರದಲ್ಲೇ ಗೆಜೆಟ್ ನೋಟಿಫಿಕೇಶನ್ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತು ಮುಖಂಡರಾದ ಪದ್ಮರಾಜ್ ಆರ್. ಪೂಜಾರಿ ತಿಳಿಸಿದ್ದಾರೆ.
ಕೆಂಪು ಕಲ್ಲು ಸಾಗಾಟಕ್ಕೆ ‘2ಡಿ’ ಎಂಬ ಹೊಸ ರಾಯಲ್ಟಿಯನ್ನು ಸೇರಿಸಿದ ಕಾರಣದಿಂದ ಕರಾವಳಿಯಲ್ಲಿ ಕೆಂಪುಕಲ್ಲು ಸಾಗಾಟಕ್ಕೆ ಸಮಸ್ಯೆ ಆರಂಭವಾಗಿತ್ತು. ರಾಯಲ್ಟಿ ಇಳಿಸಬೇಕು ಎನ್ನುವುದು ಕೆಂಪು ಕಲ್ಲು ತೆಗೆಯುವವರ ಪ್ರಮುಖ ಬೇಡಿಕೆಯಾಗಿದ್ದು, ಅದರಂತೆ ಕೆಂಪುಕಲ್ಲು ಹೊಸ ನಿಯಮಾವಳಿಗೆ ಸಂಬಂಧಿಸಿ ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ. ಜಿಲ್ಲಾ ಕಾಂಗ್ರೆಸ್ ಮುಖಂಡರು ಈಗಾಗಲೇ ಈ ಬಗ್ಗೆ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ರಾಜಸ್ವ ಇಳಿಕೆ ಮಾಡುವುದು ಹಾಗೂ ಪರವಾನಗಿ ನೀಡುವ ವಿಧಾನವನ್ನು ಸರಳೀಕರಿಸುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಸಿದ್ದರಾಮಯ್ಯ ನೇತೃತ್ವ ರಾಜ್ಯ ಸರ್ಕಾರ ಬಡವರ ಪರ ಕಾಳಜಿ ವಹಿಸುತ್ತಿದ್ದು, ಸರಳೀಕೃತ ನಿಯಮದೊಂದಿಗೆ ಬಡವರ ಪರವಾಗಿ ನೀತಿ ರೂಪಿಸಿದೆ. ಈ ಹಿಂದೆ ಇದ್ದ 5 ಲೈಸೆನ್ಸ್ ಬದಲಿಗೆ ಈಗಾಗಲೇ 25 ಲೈಸೆನ್ಸ್‌ಗಳನ್ನು ನೀಡಲಾಗಿದೆ. ಶೀಘ್ರದಲ್ಲಿ ಸರಳೀಕೃತ ನಿಯಮದೊಂದಿಗೆ ಮರಳು ಮತ್ತು ಕೆಂಪು ಕಲ್ಲು ಅಭಾವಕ್ಕೆ ಮುಕ್ತಿ ಸಿಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಮತ್ತು ಮುಖಂಡರಾದ ಪದ್ಮರಾಜ್ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು