5:12 PM Tuesday12 - May 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ… ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್: ಸಿಐಡಿ ತನಿಖೆ ತೈಲ ಬಳಕೆಯಲ್ಲಿ ಮಿತಿಯಿರಲಿ, ವರ್ಷದ ಮಟ್ಟಿಗೆ ಚಿನ್ನ ಖರೀದಿಸಬೇಡಿ::ಪ್ರಧಾನಿ ಮೋದಿ ಮಹತ್ವದ ಕರೆ ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ

ಇತ್ತೀಚಿನ ಸುದ್ದಿ

ಬಿಜೆಪಿಯದ್ದು ದುರುದ್ದೇಶದ ಪ್ರತಿಭಟನೆ; ಕೆಂಪುಕಲ್ಲು ನಿಯಮಾವಳಿ ಸರಳೀಕರಣಕ್ಕೆ ಸಂಫುಟ ಒಪ್ಪಿಗೆ ನೀಡಿದೆ: ದ.ಕ. ಕಾಂಗ್ರೆಸ್

16/09/2025, 18:39

ಮಂಗಳೂರು(reporterkarnataka.com): ಬಿಜೆಪಿ ಕೇವಲ ರಾಜಕೀಯ ದುರುದ್ದೇಶದಿಂದ ಪ್ರತಿಭಟನೆ ನಡೆಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲಿನ ರಾಜಸ್ವ ಧನ ಇಳಿಕೆ ಮತ್ತು ಸರಳ ಮರಳು ನೀತಿ ನಿಯಮಾವಳಿಯನ್ನು ಸರ್ಕಾರ ಈಗಾಗಲೇ ರಚಿಸಿದ್ದು, ಸಚಿವ ಸಂಪುಟದಿಂದ ಒಪ್ಪಿಗೆಯೂ ಸಿಕ್ಕಿದೆ. ಶೀಘ್ರದಲ್ಲೇ ಗೆಜೆಟ್ ನೋಟಿಫಿಕೇಶನ್ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತು ಮುಖಂಡರಾದ ಪದ್ಮರಾಜ್ ಆರ್. ಪೂಜಾರಿ ತಿಳಿಸಿದ್ದಾರೆ.
ಕೆಂಪು ಕಲ್ಲು ಸಾಗಾಟಕ್ಕೆ ‘2ಡಿ’ ಎಂಬ ಹೊಸ ರಾಯಲ್ಟಿಯನ್ನು ಸೇರಿಸಿದ ಕಾರಣದಿಂದ ಕರಾವಳಿಯಲ್ಲಿ ಕೆಂಪುಕಲ್ಲು ಸಾಗಾಟಕ್ಕೆ ಸಮಸ್ಯೆ ಆರಂಭವಾಗಿತ್ತು. ರಾಯಲ್ಟಿ ಇಳಿಸಬೇಕು ಎನ್ನುವುದು ಕೆಂಪು ಕಲ್ಲು ತೆಗೆಯುವವರ ಪ್ರಮುಖ ಬೇಡಿಕೆಯಾಗಿದ್ದು, ಅದರಂತೆ ಕೆಂಪುಕಲ್ಲು ಹೊಸ ನಿಯಮಾವಳಿಗೆ ಸಂಬಂಧಿಸಿ ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ. ಜಿಲ್ಲಾ ಕಾಂಗ್ರೆಸ್ ಮುಖಂಡರು ಈಗಾಗಲೇ ಈ ಬಗ್ಗೆ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ರಾಜಸ್ವ ಇಳಿಕೆ ಮಾಡುವುದು ಹಾಗೂ ಪರವಾನಗಿ ನೀಡುವ ವಿಧಾನವನ್ನು ಸರಳೀಕರಿಸುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಸಿದ್ದರಾಮಯ್ಯ ನೇತೃತ್ವ ರಾಜ್ಯ ಸರ್ಕಾರ ಬಡವರ ಪರ ಕಾಳಜಿ ವಹಿಸುತ್ತಿದ್ದು, ಸರಳೀಕೃತ ನಿಯಮದೊಂದಿಗೆ ಬಡವರ ಪರವಾಗಿ ನೀತಿ ರೂಪಿಸಿದೆ. ಈ ಹಿಂದೆ ಇದ್ದ 5 ಲೈಸೆನ್ಸ್ ಬದಲಿಗೆ ಈಗಾಗಲೇ 25 ಲೈಸೆನ್ಸ್‌ಗಳನ್ನು ನೀಡಲಾಗಿದೆ. ಶೀಘ್ರದಲ್ಲಿ ಸರಳೀಕೃತ ನಿಯಮದೊಂದಿಗೆ ಮರಳು ಮತ್ತು ಕೆಂಪು ಕಲ್ಲು ಅಭಾವಕ್ಕೆ ಮುಕ್ತಿ ಸಿಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಮತ್ತು ಮುಖಂಡರಾದ ಪದ್ಮರಾಜ್ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು