6:56 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಬಿ.ಕೆ. ಹರಿಪ್ರಸಾದ್ ಗೆ ಸೂಕ್ತ ಸ್ಥಾನಮಾನ ನೀಡಿ; ಬಿಲ್ಲವರ ಕಡೆಗಣಿಸಿದರೆ ಸ್ವತಂತ್ರ ಪಕ್ಷ ರಚನೆ: ಪ್ರಣವಾನಂದ ಸ್ವಾಮೀಜಿ ಎಚ್ಚರಿಕೆ

03/07/2023, 20:12

ಬಂಟ್ವಾಳ(reporterarnataka.com):ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ರಾಜಕೀಯವಾಗಿ ಮುಗಿಸಲು ವ್ಯವಸ್ಥಿತ ಹುನ್ನಾರ ಕಾಂಗ್ರೆಸ್ ನಲ್ಲಿ ನಡೆಯುತ್ತಿದ್ದು, ಅವರಿಗೆ ತಕ್ಷಣ ಸೂಕ್ತ ಸ್ಥಾನಮಾನ ನೀಡಬೇಕು. ಬಿಲ್ಲವರ ಕಡೆಗಣಿಸುವುದು ಮುಂದುವರಿದರೆ ಸ್ವತಂತ್ರ ಪಕ್ಷ ರಚಿಸಲಾಗುವುದು ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಆಗ್ರಹಿಸಿದರು.

ಮೆಲ್ಕಾರ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಿಪ್ರಸಾದ್ ಅವರಿಗೆ ತಕ್ಷಣವೇ ಸೂಕ್ತ ಸ್ಥಾನಮಾನ ನೀಡಬೇಕು. ಇಲ್ಲದೇ ಇದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.
ಬಿಲ್ಲವ ಸಮಾಜ ಹರಿಪ್ರಸಾದ್ ಅವರ ಬೆಂಬಲಕ್ಕೆ ನಿಲ್ಲಲಿದೆ. ಅವರಿಗೆ ಸೂಕ್ತ ಸ್ಥಾನಮಾನ ನೀಡಿಬೇಕು, ಇಲ್ಲದೇ ಹೋದಲ್ಲಿ ಸಮುದಾಯ ಬೀದಿಗಿಳಿಯುವುದು ನಿಶ್ವಿತ ಎಂದು ಸ್ವಾಮೀಜಿ ನುಡಿದರು.
ಕಾಂಗ್ರೆಸ್ ಚುನಾವಣಾ ಪೂರ್ವ ನೀಡಿದ ಭರವಸೆಯಂತೆ ಬ್ರಹ್ಮಶ್ರೀ ನಾರಾಯಣ ಗುರು ನಿಗಮಕ್ಕೆ 250 ಕೋಟಿ ರೂಪಾಯಿ ಅನುದಾನ ನೀಡಬೇಕು, ವಿಧಾನಸೌಧದ ಮುಂಭಾಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿ ನಿರ್ಮಾಣ ಮಾಡಬೇಕು, ಬಿಲ್ಲವರು ಹಾಗೂ ಈಡಿಗರ ಕುಲ ಕುಸಬು ಆಗಿರುವ ನೀರಾ ಹಾಗೂ ಸೇಂದಿ ಇಳಿಸುವ ಕಾಯಕಕ್ಕೆ ಸರಕಾರ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು, ಬಿಲ್ಲವರ ಕುಲಶಾಸ್ತ್ರೀಯ ಅಧ್ಯಯನವನ್ನು ಮಂಗಳೂರು ವಿಶ್ವವಿದ್ಯಾಲಯದ ನಾರಾಯಣ ಗುರು ಅಧ್ಯಯನ ಪೀಠಕ್ಕೆ ನೀಡಬೇಕು ಎಂದು ಒತ್ತಾಯಿಸಿದರು.
ಮಂಗಳೂರಿನಲ್ಲಿ 9 ಲಕ್ಷ, ಉಡುಪಿಯಲ್ಲಿ 3 ಲಕ್ಷ , ಕಾರವಾರದಲ್ಲಿ 5 ಲಕ್ಷ, ಶಿವಮೊಗ್ಗ ಜಿಲ್ಲೆಯಲ್ಲಿ 5 ಲಕ್ಷ ಬಿಲ್ಲವರು, ಈಡಿಗರು, ನಾಮಧಾರಿಗಳು, ದೀವರು ಇದ್ದರೂ, ಇಲ್ಲಿರುವ 22 ಮತ ಕ್ಷೇತ್ರಗಳಲ್ಲಿ ಬಹುಸಂಖ್ಯೆಯಲ್ಲಿರುವ ಬಿಲ್ಲವರನ್ನು ಕಡೆಗಣಿಸಲಾಗಿದೆ. ಇದೇ ರೀತಿ ಕಡೆಗಣಿಸಿದ್ದಲ್ಲಿ ಸ್ವತಂತ್ರ ಪಕ್ಷ ಸ್ಥಾಪಿಸಲು ಬಿಲ್ಲವ ಸಮುದಾಯ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮಹಾಮಂಡಳಿಯ ರಾಜ್ಯ ಉಪಾಧ್ಯಕ್ಷ ಜಿತೇಂದ್ರ ಜೆ. ಸುವರ್ಣ, ಜಿಲ್ಲಾ ಗೌರವಾಧ್ಯಕ್ಷ ಸಂಜೀವ ಪೂಜಾರಿ, ಜಿಲ್ಲಾ ಅಧ್ಯಕ್ಷ ಸುರೇಶ್ಚಂದ್ರ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಟಿ. ಶಂಕರ್ ಸುವರ್ಣ, ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ, ಸತೀಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು