2:29 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಅಂಧ ಮಹಿಳೆಯರ ‌ಟಿ20 ವಿಶ್ವಕಪ್‌ ಟೂರ್ನಿಗೆ ಚಾಲನೆ: ಭಾರತ – ನೇಪಾಳ‌ ನಡುವಿನ ಪಂದ್ಯ ವೀಕ್ಷಿಸಿದ ಸಚಿವೆ ಹೆಬ್ಬಾಳ್ಕರ್

14/11/2025, 22:00

ಬೆಂಗಳೂರು(reporterkarnataka.com): ವಿಶೇಷ ಮಕ್ಕಳು ಪಾಲ್ಗೊಳ್ಳುತ್ತಿರುವ ಅಂಧರ ಕ್ರಿಕೆಟ್ ಟೂರ್ನಿಗೆ ಜಾಗತಿಕವಾಗಿ ಮನ್ನಣೆ ಸಿಗಲಿ ಎಂಬುದೇ ನನ್ನ ಆಶಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಂಗಳೂರಿನ ತಿರುಮೇನಹಳ್ಳಿಯ ಸಂಪ್ರಸಿದ್ದಿ ಮೈದಾನದಲ್ಲಿ ನಡೆಯುತ್ತಿರುವ ಅಂಧ ಮಹಿಳೆಯರ ಮೊದಲ ಟಿ20 ವಿಶ್ವಕಪ್ ಟೂರ್ನಿಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಸರಿಯಾಗಿ ಕೈಕಾಲು ಇದ್ದರೂ, ಕಣ್ಣುಗಳು ಕಾಣಿಸಿದರೂ ಸಾಮಾನ್ಯ ಜನರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಕಷ್ಟ. ಆದರೆ, ಸರಿಯಾಗಿ ಕಣ್ಣುಕಾಣದ ಮಕ್ಕಳು ಕ್ರಿಕೆಟ್‌ ಆಡುವುದು ಅಷ್ಟು ಸುಲಭವಲ್ಲ ಎಂದರು.


ಈ ಮಹತ್ವದ ಟೂರ್ನಿಯ ಪ್ರಮುಖ ಭಾಗವನ್ನು ಬೆಂಗಳೂರಿನಲ್ಲಿ ಆಯೋಜಿಸುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ನಮ್ಮ ರಾಜ್ಯವು ಕ್ರೀಡೆಗೆ ಸಮಾನ ಅವಕಾಶಗಳನ್ನು ಉತ್ತೇಜಿಸುವಲ್ಲಿ ಮುಂಚೂಣಿಯಲ್ಲಿರುವುದು ಎಲ್ಲರೂ ತಿಳಿದಿರುವ ವಿಷಯ. ನಮ್ಮ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.

* *ಪಂದ್ಯ ವೀಕ್ಷಿಸಿದ ಸಚಿವರು:*
ಭಾರತ ಹಾಗೂ ನೇಪಾಳ ನಡುವಿನ ಪಂದ್ಯವನ್ನು ಕೆಲಕಾಲ ಸಚಿವರು ವೀಕ್ಷಿಸಿದರು. ಚಪ್ಪಾಳೆ ತಟ್ಟುವ ಮೂಲಕ ಎರಡೂ ತಂಡಗಳ ಆಟಗಾರ್ತಿಯರನ್ನು ಹುರಿದುಂಬಿಸಿದರು. ಬಳಿಕ ಕೆಲಕಾಲ ಪಂದ್ಯದ ವೀಕ್ಷಕ ವಿವರಣೆಯಲ್ಲಿ ಪಾಲ್ಗೊಂಡರು.
ಈ ವೇಳೆ ಸಮರ್ಥನಂ ಟ್ರಸ್ಟ್ ಸಂಸ್ಥಾಪಕರಾದ ಡಾ.ಮಹಾಂತೇಶ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು