10:54 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

Blood Donation | 3 ದಿನಗಳ ಬೃಹತ್ ರಕ್ತದಾನ ಶಿಬಿರಕ್ಕೆ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಚಾಲನೆ

21/02/2025, 09:02

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಜಿಲ್ಲೆಯ ಸಂಡೂರಿನ ತೋರಣಗಲ್ಲು ಬಳಿಯ ಜಿಂದಾಲ್ ನಲ್ಲಿ ಇಂದಿನಿಂದ (ಫೆ.20, 21, 22) ಮೂರು ದಿನಗಳ ಕಾಲ ನಡೆಯಲಿರುವ ಬೃಹತ್ ರಕ್ತದಾನ ಶಿಬಿರಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಗುರುವಾರ ಒಪಿಜೆ ಸೆಂಟರ್ ಸಭಾಂಗಣದಲ್ಲಿ ಚಾಲನೆ ನೀಡಿದರು.


ಕೃತಕವಾಗಿ ತಯಾರಿಸಲು ಸಾಧ್ಯವಾಗದ ರಕ್ತವನ್ನು ಮತ್ತೊಬ್ಬರಿಗೆ ನೀಡಿ ಜೀವ ಉಳಿಸುವಂಥ ಕೆಲಸ ನಿಜಕ್ಕೂ ಶ್ರೇಷ್ಠವಾಗಿದ್ದು, 18 ವರ್ಷ ತುಂಬಿದ ಎಲ್ಲಾ ಅರ್ಹರು ತಪ್ಪದೇ ರಕ್ತದಾನ ಮಾಡಬೇಕು ಎಂದು ಕರೆ ನೀಡಿದರು.
ಜಿಲ್ಲೆಯಲ್ಲಿ ರಕ್ತದಾನ ಶಿಬಿರಗಳು ಕ್ಷೀಣಿಸುತ್ತಿದ್ದವು. ವರ್ಷವಾರು ನಿಗದಿತ ಗುರಿಗಿಂತ ಕಡಿಮೆ ಸಂಗ್ರಹವಿದೆ. ಇದಕ್ಕೆ ಪ್ರೋತ್ಸಾಹಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಹಣಾ ಘಟಕ ಇವರೊಂದಿಗೆ ಜೆಎಸ್‌ಡಬ್ಲ್ಯು ಜಿಂದಾಲ್ ಸಹಯೋಗದಲ್ಲಿ ಜಿಂದಾಲ್ ಆವರಣದ ವಿವಿಧ 15 ಸ್ಥಳಗಳಲ್ಲಿ ರಕ್ತ ಭಂಡಾರ ಮೂಲಕ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ತುರ್ತು ಸಂದರ್ಭದಲ್ಲಿ ಜೀವ ಉಳಿಸಲು ಹಾಗೂ ರಕ್ತದ ಕೊರತೆ ತಗ್ಗಿಸಲು ರಕ್ತದಾನ ಶಿಬಿರವು ಫೆ.22 ರ ವರೆಗೆ ನಡೆಯಲಿದ್ದು, ಈ ಬೃಹತ್ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಪ್ರತಿಯೊಬ್ಬರೂ ರಕ್ತದಾನ ಮಾಡಬಹುದು ಎಂದರು.
ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಹಣಾ ಘಟಕ ಅಧಿಕಾರಿ ಡಾ.ಇಂದ್ರಾಣಿ ವಿ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮಲ್ಲಿನ ಎಲ್ಲಾ ಅಂಗಾಂಗಗಳನ್ನು ದಾನ ಮಾಡಬಹುದಾಗಿದ್ದು, ಅದರಲ್ಲಿ ರಕ್ತದಾನ ಬಹುಮುಖ್ಯವಾಗಿದೆ. ಜಿಲ್ಲೆಯ ಬಿಮ್ಸ್ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆ ಮತ್ತು ಇತರೆ ರಕ್ತ ಕೇಂದ್ರಗಳಲ್ಲಿ ಅತಿ ಅವಶ್ಯಕವಾಗಿದೆ ಎಂದರು.
ಅಪಘಾತಗಳಿಂದ ಗಾಯಗೊಂಡವರಿಗೆ ಹಾಗೂ ರಕ್ತಹೀನತೆಯಿಂದ ಬಳಲುವ ಗರ್ಭಿಣಿಯರಿಗೆ, ಹೆರಿಗೆ ಸಂದರ್ಭದಲ್ಲಿ ಗರ್ಭಿಣಿಯರಿಗೆ ಮತ್ತು ಥಲಸೀಮಿಯಾ ದಂತಹ ಕಾಯಿಲೆಯಿಂದ ಬಳಲುತ್ತಿರುವವರಿಗೆ ನಿರಂತರವಾಗಿ ರಕ್ತದ ಅವಶ್ಯಕತೆ ಇದೆ. ರಕ್ತದಾನದಿಂದ ನಮ್ಮ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಗೆ ನಿರಂತರವಾಗಿ ಸಹಕಾರಿಯಾಗಲಿದೆ ಎಂದರು.
ಈ ಶಿಬಿರದಲ್ಲಿ 5000 ರಕ್ತ ಯುನಿಟ್ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಈ ವರ್ಷದಲ್ಲಿ ಒಟ್ಟು 13,792 ರಕ್ತ ಯುನಿಟ್ ಸಂಗ್ರಹ ಮಾಡುವ ಗುರಿ ಇದ್ದು, ಈವರೆಗೆ 6000 ರಕ್ತ ಯುನಿಟ್ ಸಂಗ್ರಹ ಮಾಡಲಾಗಿದೆ ಎಂದು ಅವರು ತಿಳಿಸಿದರು.
18 ವರ್ಷ ತುಂಬಿದ ಎಲ್ಲಾ ಅರ್ಹ ಪುರುಷ ಮತ್ತು ಮಹಿಳೆಯರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಜಿಲ್ಲೆಯಲ್ಲಿ ರಕ್ತದ ಕೊರತೆ ನೀಗಿಸಿ ಜೀವ ಉಳಿಸುವ ಕಾರ್ಯಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.
ರಕ್ತದಾನ ಶಿಬಿರ ನಡೆಯುವ ಸ್ಥಳ:ಜಿಂದಾಲ್‌ನ ಓಪಿಜೆ ಸೆಂಟರ್‌ನ ತಮನ್ನಾ ಶಾಲೆ, ಜಿಂದಾಲ್ ಸಂಜೀವಿನಿ ಆಸ್ಪತ್ರೆ, ವಿದ್ಯಾನಗರದ ಆರೋಗ್ಯ ಕೇಂದ್ರ ಮತ್ತು ಲಿಟಲ್ ಎಲ್ಲೆ, ಹೆಚ್‌ಎಸ್‌ಟಿ ಕಾಂಪ್ಲೆಕ್ಸ್, ಸಿಆರ್‌ಎಂ-1 ಪ್ಲಾö್ಯಂಟ್, ಲಾಜಿಸ್ಟಿಕ್ ಪ್ಲಾಂಟ್, ಎಸ್‌ಎಂಎಸ್-4 ಪ್ಲಾö್ಯಂಟ್, ಹೆಚ್‌ಆರ್‌ಡಿ ಪ್ಲಾö್ಯಂಟ್, ಜೆಎಸ್‌ಎಂಎಸ್‌ಹೆಚ್‌ನ ಸ್ಟೆಪ್‌ಡೌನ್ ಐಸಿಯು ಮತ್ತು ಜೆಎಸ್‌ಡಬ್ಲೂö್ಯ ಎನರ್ಜಿ ಸಭಾಂಗಣದಲ್ಲಿ ಬೆಳಿಗ್ಗೆ 09 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು