2:18 PM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಬ್ಲಡ್ ಇಸ್ ಥಿಕ್ಕರ್ ದೆನ್ ವಾಟರ್, ಕುಲದ ಬಗ್ಗೆ ಮಾತನಾಡುವ ಸಿ.ಟಿ. ರವಿ ಹಮ್ಮಿನ ಕುರಿತು ಜನ ಯೋಚಿಸ್ತಾರೆ: ಎಂಎಲ್ ಸಿ ಭೋಜೇಗೌಡ

14/05/2023, 23:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬ್ಲಡ್ ಇಸ್ ಥಿಕ್ಕರ್ ದೆನ್ ವಾಟರ್. ಕುಲದ ಬಗ್ಗೆ ಮಾತನಾಡುವಾಗ ಜನ ಆತನ ಹಮ್ಮಿನ ಬಗ್ಗೆ ಯೋಚಿಸ್ತಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೋಲಿಗೆ ಅವರ ನಾಲಿಗೆಯೇ ಕಾರಣ ಎಂದು ಜನತಾ ದಳದ
ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಹೇಳಿದರು.
ಸಿ.ಟಿ.ರವಿ ಬಹಳ ದೊಡ್ಡ ಮಟ್ಟದಲ್ಲಿ ಬೆಳವಣಿಗೆ ಆದವರು. ಅವರಿಗೆ ರಾಷ್ಟ್ರಮಟ್ಟದಲ್ಲಿ ಕೆಲಸ ಮಾಡುವ ಯೋಗವೂ ಲಭಿಸಿತ್ತು. ಟೀಕೆಗಳು ತಪ್ಪಲ್ಲ, ಆದರೆ, ಅದಕ್ಕೊಂದು ಇತಿಮಿತಿ ಇರಬೇಕು.
ದೇವೇಗೌಡರಿಗೆ ಸಾಬರಾಗಿ ಹುಟ್ಲಿ ಅನ್ನೋದು, ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್ ಅನ್ನೋದು ಸರಿಯಲ್ಲ ಎಂದರು.
ರಾಜಕೀಯ ಅಸ್ತ್ರದ ಟೀಕೆ ಸರಿ, ವೈಯಕ್ತಿಕ ಟೀಕೆ ಸರಿಯಲ್ಲ. ಸಿ.ಟಿ.ರವಿ ಅವರು ಸದನದ ಒಳಗೆ-ಹೊರಗೆ ಎರಡೂ ಕಡೆ ವೈಯಕ್ತಿಕ ಟೀಕೆ ಮಾಡಿದ್ದಾರೆ. ಟೀಕೆ ಮಾಡುವಾಗ ವ್ಯಕ್ತಿತ್ವ, ರಾಜಕೀಯ ಮುತ್ಸದ್ದಿತನವನ್ನ ಯೋಚನೆ ಮಾಡಬೇಕು. ಯಾರನ್ನೋ ಮೆಚ್ವಿಸಲು, ಕ್ಷಣಿಕ ಸುಖಕ್ಕೆ, ಕಾರ್ಯಕರ್ತರ ಮೆಚ್ಚಿಸಲು ವೈಯಕ್ತಿಕ ಟೀಕೆ ಸರಿಯಲ್ಲ. ಸಿ.ಟಿ.ರವಿ ಯಾರನ್ನ ಬಿಟ್ಡಿದ್ದಾರೆ, ಯಾರನ್ನೂ ಬಿಟ್ಟಿಲ್ಲ.
ಟೀಕೆ ಮಾಡುವಾಗಲು ರಾಜಕೀಯ ಸ್ಟ್ಯಾಂಡರ್ಡ್ ನಲ್ಲಿ ಟೀಕೆ ಮಾಡಬೇಕು. ಕುಲದ ಕುತ್ತಿಗೆ ಉದ್ದ ಸರ್… ಅಷ್ಟು ಸುಲಭ ಇಲ್ಲ. ದುರಾಡಳಿತ, ದುರಾಂಕಾರ, ನಾಲಿಗೆ ಎಲ್ಲವೂ ಸೇರಿ ಕೂಡಿ ಸೋಲಿಸಿವೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು