8:21 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಬ್ಲಡ್ ಇಸ್ ಥಿಕ್ಕರ್ ದೆನ್ ವಾಟರ್, ಕುಲದ ಬಗ್ಗೆ ಮಾತನಾಡುವ ಸಿ.ಟಿ. ರವಿ ಹಮ್ಮಿನ ಕುರಿತು ಜನ ಯೋಚಿಸ್ತಾರೆ: ಎಂಎಲ್ ಸಿ ಭೋಜೇಗೌಡ

14/05/2023, 23:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬ್ಲಡ್ ಇಸ್ ಥಿಕ್ಕರ್ ದೆನ್ ವಾಟರ್. ಕುಲದ ಬಗ್ಗೆ ಮಾತನಾಡುವಾಗ ಜನ ಆತನ ಹಮ್ಮಿನ ಬಗ್ಗೆ ಯೋಚಿಸ್ತಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೋಲಿಗೆ ಅವರ ನಾಲಿಗೆಯೇ ಕಾರಣ ಎಂದು ಜನತಾ ದಳದ
ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಹೇಳಿದರು.
ಸಿ.ಟಿ.ರವಿ ಬಹಳ ದೊಡ್ಡ ಮಟ್ಟದಲ್ಲಿ ಬೆಳವಣಿಗೆ ಆದವರು. ಅವರಿಗೆ ರಾಷ್ಟ್ರಮಟ್ಟದಲ್ಲಿ ಕೆಲಸ ಮಾಡುವ ಯೋಗವೂ ಲಭಿಸಿತ್ತು. ಟೀಕೆಗಳು ತಪ್ಪಲ್ಲ, ಆದರೆ, ಅದಕ್ಕೊಂದು ಇತಿಮಿತಿ ಇರಬೇಕು.
ದೇವೇಗೌಡರಿಗೆ ಸಾಬರಾಗಿ ಹುಟ್ಲಿ ಅನ್ನೋದು, ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್ ಅನ್ನೋದು ಸರಿಯಲ್ಲ ಎಂದರು.
ರಾಜಕೀಯ ಅಸ್ತ್ರದ ಟೀಕೆ ಸರಿ, ವೈಯಕ್ತಿಕ ಟೀಕೆ ಸರಿಯಲ್ಲ. ಸಿ.ಟಿ.ರವಿ ಅವರು ಸದನದ ಒಳಗೆ-ಹೊರಗೆ ಎರಡೂ ಕಡೆ ವೈಯಕ್ತಿಕ ಟೀಕೆ ಮಾಡಿದ್ದಾರೆ. ಟೀಕೆ ಮಾಡುವಾಗ ವ್ಯಕ್ತಿತ್ವ, ರಾಜಕೀಯ ಮುತ್ಸದ್ದಿತನವನ್ನ ಯೋಚನೆ ಮಾಡಬೇಕು. ಯಾರನ್ನೋ ಮೆಚ್ವಿಸಲು, ಕ್ಷಣಿಕ ಸುಖಕ್ಕೆ, ಕಾರ್ಯಕರ್ತರ ಮೆಚ್ಚಿಸಲು ವೈಯಕ್ತಿಕ ಟೀಕೆ ಸರಿಯಲ್ಲ. ಸಿ.ಟಿ.ರವಿ ಯಾರನ್ನ ಬಿಟ್ಡಿದ್ದಾರೆ, ಯಾರನ್ನೂ ಬಿಟ್ಟಿಲ್ಲ.
ಟೀಕೆ ಮಾಡುವಾಗಲು ರಾಜಕೀಯ ಸ್ಟ್ಯಾಂಡರ್ಡ್ ನಲ್ಲಿ ಟೀಕೆ ಮಾಡಬೇಕು. ಕುಲದ ಕುತ್ತಿಗೆ ಉದ್ದ ಸರ್… ಅಷ್ಟು ಸುಲಭ ಇಲ್ಲ. ದುರಾಡಳಿತ, ದುರಾಂಕಾರ, ನಾಲಿಗೆ ಎಲ್ಲವೂ ಸೇರಿ ಕೂಡಿ ಸೋಲಿಸಿವೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು