3:22 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ತುಳು ಭಾಷೆ ತುಳು ಸಂಸ್ಕೃತಿಯ ಬಗ್ಗೆ ಎಲ್ಲರೂ ಒಲವು ಬೆಳೆಸಿಕೊಳ್ಳಿ: ಪ್ರೊ. ಕೃಷ್ಣಮೂರ್ತಿ

02/03/2025, 10:13

ಮಂಗಳೂರು (reporterkarnataka.com): ತುಳು ಸಾಹಿತ್ಯ ಅಕಾಡೆಮಿ ಹಾಗೂ ತುಳು ಪರಿಷತ್ ಜಂಟಿ ಆಶ್ರಯದಲ್ಲಿ ನಡೆಯುವ ವಿದ್ಯಾರ್ಥಿ ತುಳು ಸಮ್ಮೇಳನದ ಪೂರ್ವಭಾವಿ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮ ತುಳು ಭವನದಲ್ಲಿ ಜರಗಿತು.
ಸುರತ್ಕಲ್ ಗೋವಿಂದದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.
ಕೃಷ್ಣಮೂರ್ತಿ ಸುರತ್ಕಲ್ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ತುಳು ಭಾಷೆ ತುಳು ಸಂಸ್ಕøತಿಯ ಬಗ್ಗೆ ಎಲ್ಲರೂ ಒಲವು ಬೆಳೆಸಿಕೊಳ್ಳಬೇಕು, ಪದವಿ ಶಿಕ್ಷಣದಲ್ಲಿ ತುಳು ಪಠ್ಯ ಎಲ್ಲಾ ಕಾಲೇಜುಗಳಿಗೆ ವಿಸ್ತರಣೆಯಾಗಲು ಈ ವಿದ್ಯಾರ್ಥಿ ತುಳು ಸಮ್ಮೇಳನ ಸಹಕಾರಿಯಾಗಲಿ ಎಂದು ಆಶಯ ವ್ಯಕ್ತಪಡಿಸಿದರು. ಮುಖ್ಯ ಅತಿಥಿಯಾಗಿ ಬಸ್ ಮಾಲಕರ ಸಂಘದ ಮಾಜಿ ಅಧ್ಯಕ್ಷ ಜಯಶೀಲ ಅಡ್ಯಂತಾಯ ಮಾತನಾಡಿ, ತುಳು ಭಾಷೆ ನಮ್ಮೆಲ್ಲರ ಮಾತೃ ಭಾಷೆಯಾಗಿದ್ದು, ಭಾಷೆಯ ಬಗ್ಗೆ ಅಭಿಮಾನ ಮೂಡಿಸಲು ಇಂತಹ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದು ಹೇಳಿದರು.
ತುಳು ಪರಿಷತ್ ಗೌರವಾಧ್ಯಕ್ಷ ಡಾ. ಪ್ರಭಾಕರ್ ನೀರುಮಾರ್ಗ ಮಾತನಾಡಿ, ಪ್ರೌಢ ಶಾಲೆ ಹಾಗೂ ಪದವಿ, ಸ್ನಾತಕೋತ್ತರ ಪದವಿಯಲ್ಲಿ ತುಳು ಪಠ್ಯ ಜಾರಿಯಲ್ಲಿದೆ. ಪಿಯುಸಿ ತರಗತಿಯಲ್ಲೂ ತುಳು ಭಾಷೆಯನ್ನು ಅಳವಡಿಸಲು ಸರಕಾರ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಿದ್ದರು. ಶಾಲಿನಿ ರೈ, ಅಮಿತ , ರಾಕೇಶ್ ಕುಂದರ್, ರಮೇಶ್ ಮಂಚಕಲ್, ಚಂದ್ರಕಲಾ ರಾವ್ ಉಪಸ್ಥಿತರಿದ್ದರು.
ಎರಡನೇ ಹಂತದ ಈ ಸ್ಪರ್ಧಾ ಕೂಟದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ತುಳು ಭಾಷಣ ಸ್ಪರ್ಧೆ ಹಾಗೂ ತುಳು ಸಿನಿಮಾ ಗೀತೆಗಳ ಗಾಯನ ಸ್ಪರ್ಧೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು