7:11 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ತುಳು ಭಾಷೆ ತುಳು ಸಂಸ್ಕೃತಿಯ ಬಗ್ಗೆ ಎಲ್ಲರೂ ಒಲವು ಬೆಳೆಸಿಕೊಳ್ಳಿ: ಪ್ರೊ. ಕೃಷ್ಣಮೂರ್ತಿ

02/03/2025, 10:13

ಮಂಗಳೂರು (reporterkarnataka.com): ತುಳು ಸಾಹಿತ್ಯ ಅಕಾಡೆಮಿ ಹಾಗೂ ತುಳು ಪರಿಷತ್ ಜಂಟಿ ಆಶ್ರಯದಲ್ಲಿ ನಡೆಯುವ ವಿದ್ಯಾರ್ಥಿ ತುಳು ಸಮ್ಮೇಳನದ ಪೂರ್ವಭಾವಿ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮ ತುಳು ಭವನದಲ್ಲಿ ಜರಗಿತು.
ಸುರತ್ಕಲ್ ಗೋವಿಂದದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.
ಕೃಷ್ಣಮೂರ್ತಿ ಸುರತ್ಕಲ್ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ತುಳು ಭಾಷೆ ತುಳು ಸಂಸ್ಕøತಿಯ ಬಗ್ಗೆ ಎಲ್ಲರೂ ಒಲವು ಬೆಳೆಸಿಕೊಳ್ಳಬೇಕು, ಪದವಿ ಶಿಕ್ಷಣದಲ್ಲಿ ತುಳು ಪಠ್ಯ ಎಲ್ಲಾ ಕಾಲೇಜುಗಳಿಗೆ ವಿಸ್ತರಣೆಯಾಗಲು ಈ ವಿದ್ಯಾರ್ಥಿ ತುಳು ಸಮ್ಮೇಳನ ಸಹಕಾರಿಯಾಗಲಿ ಎಂದು ಆಶಯ ವ್ಯಕ್ತಪಡಿಸಿದರು. ಮುಖ್ಯ ಅತಿಥಿಯಾಗಿ ಬಸ್ ಮಾಲಕರ ಸಂಘದ ಮಾಜಿ ಅಧ್ಯಕ್ಷ ಜಯಶೀಲ ಅಡ್ಯಂತಾಯ ಮಾತನಾಡಿ, ತುಳು ಭಾಷೆ ನಮ್ಮೆಲ್ಲರ ಮಾತೃ ಭಾಷೆಯಾಗಿದ್ದು, ಭಾಷೆಯ ಬಗ್ಗೆ ಅಭಿಮಾನ ಮೂಡಿಸಲು ಇಂತಹ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದು ಹೇಳಿದರು.
ತುಳು ಪರಿಷತ್ ಗೌರವಾಧ್ಯಕ್ಷ ಡಾ. ಪ್ರಭಾಕರ್ ನೀರುಮಾರ್ಗ ಮಾತನಾಡಿ, ಪ್ರೌಢ ಶಾಲೆ ಹಾಗೂ ಪದವಿ, ಸ್ನಾತಕೋತ್ತರ ಪದವಿಯಲ್ಲಿ ತುಳು ಪಠ್ಯ ಜಾರಿಯಲ್ಲಿದೆ. ಪಿಯುಸಿ ತರಗತಿಯಲ್ಲೂ ತುಳು ಭಾಷೆಯನ್ನು ಅಳವಡಿಸಲು ಸರಕಾರ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಿದ್ದರು. ಶಾಲಿನಿ ರೈ, ಅಮಿತ , ರಾಕೇಶ್ ಕುಂದರ್, ರಮೇಶ್ ಮಂಚಕಲ್, ಚಂದ್ರಕಲಾ ರಾವ್ ಉಪಸ್ಥಿತರಿದ್ದರು.
ಎರಡನೇ ಹಂತದ ಈ ಸ್ಪರ್ಧಾ ಕೂಟದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ತುಳು ಭಾಷಣ ಸ್ಪರ್ಧೆ ಹಾಗೂ ತುಳು ಸಿನಿಮಾ ಗೀತೆಗಳ ಗಾಯನ ಸ್ಪರ್ಧೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು