4:37 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಬಂಟ್ವಾಳ: ಬರಿಮಾರು ಗ್ರಾಪಂ ಸದಸ್ಯ ಸಹಿತ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

04/04/2023, 20:33

ಬಂಟ್ವಾಳ(reporterkarnataka.com):
ಬರಿಮಾರು ಗ್ರಾಪಂ ಪಕ್ಷೇತರ ಸದಸ್ಯ ಹರಿಕೃಷ್ಣ ಬರಿಮಾರು, ಗುರುಪ್ರಸಾದ್, ಶರತ್,ಲತೀಶ್, ಯಶೋಧರ ಅವರು ಶಾಸಕ ರಾಜೇಶ್ ನಾಯ್ಕ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.
ಅವರಿಗೆ ಪಕ್ಷದ ಶಾಲು ಹಾಕಿ ಶಾಸಕ ರಾಜೇಶ್ ನಾಯ್ಕ್ ಹಾಗೂ ಪಕ್ಷದ ಅಧ್ಯಕ್ಷ ದೇವಪ್ಪ ಪೂಜಾರಿ ಅವರು ಬರಮಾಡಿಕೊಂಡರು.
ಬಿಜೆಪಿ ಪಕ್ಷದಲ್ಲಿ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ ಹರಿಕೃಷ್ಣ ಬರಿಮಾರು ಅವರು ಕಳೆದ ಗ್ರಾಪಂ ಚುನಾವಣಾ ಸಂದರ್ಭದಲ್ಲಿ ಪಕ್ಷದಿಂದ ಹೊರಬಂದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿ ಅ ಬಳಿಕ ದ ದಿನಗಳಲ್ಲಿ ಬಿಜೆಪಿ ಪಕ್ಷದಿಂದ ದೂರ ಇದ್ದರು. ಆದರೆ 2023ರ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕರ ಅಭಿವೃದ್ಧಿಯನ್ನು ಹಾಗೂ ಪಕ್ಷದ ಮೇಲಿನ ಅಭಿಮಾನದಿಂದ ಮತ್ತೆ ಬಿಜೆಪಿಯತ್ತ ಮುಖಮಾಡಿದ್ದಾರೆ.
ಈ ಸಂದರ್ಭದಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಪ್ರಮುಖರಾದ ಸುದರ್ಶನ ಬಜ, ರವೀಶ್ ಶೆಟ್ಟಿ ಕರ್ಕಳ, ಗಣೇಶ್ ರೈ ಮಾಣಿ, ರಮನಾಥ ರಾಯಿ, ಪ್ರಕಾಶ್ ಆಂಚನ್, ಮೋಹನ್ ಪಿ.ಎಸ್.ಕಮಲಾಕ್ಷಿ ಪೂಜಾರಿ, ಸದಾಶಿವ ಬರಿಮಾರು,ಜಯಂತ್ ಮುಳಿಬೈಲು, ದಿನೇಶ್ ಶೆಟ್ಟಿ ದಂವೆದಾರ್, ಯಶೋಧರ ಕರ್ಬೆಟ್ಟು ಉದಯ ಕಾಂಜಿಲ, ಅಜಿತ್ ಶೆಟ್ಟಿ ಕಾವಳಮೂಡೂರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು