5:14 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಬಾರ್ಡರ್​-ಗವಾಸ್ಕರ್​ ಟೆಸ್ಟ್​ ಸರಣಿಯ ಮೊದಲ ಪಂದ್ಯ: ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಜಯ

25/11/2024, 16:11

ಪರ್ತ್(reporterkarnataka.com): ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಬಾರ್ಡರ್​-ಗವಾಸ್ಕರ್​ ಟೆಸ್ಟ್​ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಜಯಗಳಿಸಿದೆ.
ಪರ್ತ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ 295 ರನ್​ಗಳಿಂದ ಗೆಲುವು ಕಂಡಿದೆ.
ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಮಾಡಿದ್ದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ 150 ರನ್​ಗಳಿಸಿತು. ಆದರೆ ಬೌಲಿಂಗ್​ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿ ಕಾಂಗರೂ ಪಡೆಯನ್ನು 104 ರನ್​ಗಳಿಗೆ ಕಟ್ಟಿ ಹಾಕಿ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿತು. ಎರಡನೇ ಇನ್ನಿಂಗ್ಸ್​ನಲ್ಲಿ ಭಾರತ ಬಾಟ್ಸ್ ಮೆನ್ ಗಳು ಭಾರೀ ರೈನ್ ಬಾರಿದರು.
ಜೈಸ್ವಾಲ್​ (161), ಕೆ.ಎಲ್.ರಾಹುಲ್​ (77) ರನ್​ ಗಳಿಸಿದರು. ಬಳಿಕ ವಿರಾಟ್​ ಕೊಹ್ಲಿ ಶತಕ ಸಿಡಿಸುತ್ತಿದ್ದಂತೆ ಭಾರತ 487/6 ರನ್‌ಗಳಿಗೆ ಡಿಕ್ಲೇರ್​ ಮಾಡಿಕೊಂಡಿತ್ತು. ಇದರೊಂದಿಗೆ ಭಾರತ 534 ರನ್‌ಗಳ ಬೃಹತ್​ ಗುರಿ ನೀಡಿತು. ಆಸೀಸ್​ ಪಡೆ 17 ರನ್​ಗಳಿಗೆ ಪ್ರಮುಖ ನಾಲ್ಕು ವಿಕೆಟ್​ ಕಳೆದುಕೊಂಡಿತು. ಆರಂಭಿಕ​ ಬ್ಯಾಟ್ಸ್ ಮೆನ್ ಮೆಕ್​ಸ್ವೀನಿ ಶೂನ್ಯಕ್ಕೆ ನಿರ್ಗಮಿಸಿದರೆ, ಪ್ಯಾಟ್​ ಕಮಿನ್ಸ್​ 2, ಲಬೋಶ್ಚಗೇನೆ 3 ರನ್‌ಗಳಿಗೆ ನಿರ್ಗಮಿಸಿದರು. ಇದರೊಂದಿಗೆ ಆಸ್ಟ್ರೇಲಿಯಾ 3ನೇ ದಿನದಾಟಕ್ಕೆ 12 ರನ್​ಗಳಿಗೆ 3 ವಿಕೆಟ್​ ಕಳೆದುಕೊಂಡಿತು. ನಾಲ್ಕನೇ ದಿನ ಕೂಡಾ ಬ್ಯಾಟಿಂಗ್​ ವೈಫಲ್ಯ ಅನುಭವಿಸಿದ ಕಾಂಗರೂ ಪಡೆ ಉಳಿದ 7 ವಿಕೆಟ್​ಗಳನ್ನು ಕಳೆದುಕೊಂಡು ಹೀನಾಯ ಪರಾಭವ ಕಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು