2:34 PM Wednesday17 - December 2025
ಬ್ರೇಕಿಂಗ್ ನ್ಯೂಸ್
Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ…

ಇತ್ತೀಚಿನ ಸುದ್ದಿ

ಬಾರ್ಡರ್​-ಗವಾಸ್ಕರ್​ ಟೆಸ್ಟ್​ ಸರಣಿಯ ಮೊದಲ ಪಂದ್ಯ: ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಜಯ

25/11/2024, 16:11

ಪರ್ತ್(reporterkarnataka.com): ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಬಾರ್ಡರ್​-ಗವಾಸ್ಕರ್​ ಟೆಸ್ಟ್​ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಜಯಗಳಿಸಿದೆ.
ಪರ್ತ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ 295 ರನ್​ಗಳಿಂದ ಗೆಲುವು ಕಂಡಿದೆ.
ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಮಾಡಿದ್ದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ 150 ರನ್​ಗಳಿಸಿತು. ಆದರೆ ಬೌಲಿಂಗ್​ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿ ಕಾಂಗರೂ ಪಡೆಯನ್ನು 104 ರನ್​ಗಳಿಗೆ ಕಟ್ಟಿ ಹಾಕಿ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿತು. ಎರಡನೇ ಇನ್ನಿಂಗ್ಸ್​ನಲ್ಲಿ ಭಾರತ ಬಾಟ್ಸ್ ಮೆನ್ ಗಳು ಭಾರೀ ರೈನ್ ಬಾರಿದರು.
ಜೈಸ್ವಾಲ್​ (161), ಕೆ.ಎಲ್.ರಾಹುಲ್​ (77) ರನ್​ ಗಳಿಸಿದರು. ಬಳಿಕ ವಿರಾಟ್​ ಕೊಹ್ಲಿ ಶತಕ ಸಿಡಿಸುತ್ತಿದ್ದಂತೆ ಭಾರತ 487/6 ರನ್‌ಗಳಿಗೆ ಡಿಕ್ಲೇರ್​ ಮಾಡಿಕೊಂಡಿತ್ತು. ಇದರೊಂದಿಗೆ ಭಾರತ 534 ರನ್‌ಗಳ ಬೃಹತ್​ ಗುರಿ ನೀಡಿತು. ಆಸೀಸ್​ ಪಡೆ 17 ರನ್​ಗಳಿಗೆ ಪ್ರಮುಖ ನಾಲ್ಕು ವಿಕೆಟ್​ ಕಳೆದುಕೊಂಡಿತು. ಆರಂಭಿಕ​ ಬ್ಯಾಟ್ಸ್ ಮೆನ್ ಮೆಕ್​ಸ್ವೀನಿ ಶೂನ್ಯಕ್ಕೆ ನಿರ್ಗಮಿಸಿದರೆ, ಪ್ಯಾಟ್​ ಕಮಿನ್ಸ್​ 2, ಲಬೋಶ್ಚಗೇನೆ 3 ರನ್‌ಗಳಿಗೆ ನಿರ್ಗಮಿಸಿದರು. ಇದರೊಂದಿಗೆ ಆಸ್ಟ್ರೇಲಿಯಾ 3ನೇ ದಿನದಾಟಕ್ಕೆ 12 ರನ್​ಗಳಿಗೆ 3 ವಿಕೆಟ್​ ಕಳೆದುಕೊಂಡಿತು. ನಾಲ್ಕನೇ ದಿನ ಕೂಡಾ ಬ್ಯಾಟಿಂಗ್​ ವೈಫಲ್ಯ ಅನುಭವಿಸಿದ ಕಾಂಗರೂ ಪಡೆ ಉಳಿದ 7 ವಿಕೆಟ್​ಗಳನ್ನು ಕಳೆದುಕೊಂಡು ಹೀನಾಯ ಪರಾಭವ ಕಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು