10:37 AM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಬಾರ್ಡರ್​-ಗವಾಸ್ಕರ್​ ಟೆಸ್ಟ್​ ಸರಣಿಯ ಮೊದಲ ಪಂದ್ಯ: ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಜಯ

25/11/2024, 16:11

ಪರ್ತ್(reporterkarnataka.com): ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಬಾರ್ಡರ್​-ಗವಾಸ್ಕರ್​ ಟೆಸ್ಟ್​ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಜಯಗಳಿಸಿದೆ.
ಪರ್ತ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ 295 ರನ್​ಗಳಿಂದ ಗೆಲುವು ಕಂಡಿದೆ.
ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಮಾಡಿದ್ದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ 150 ರನ್​ಗಳಿಸಿತು. ಆದರೆ ಬೌಲಿಂಗ್​ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿ ಕಾಂಗರೂ ಪಡೆಯನ್ನು 104 ರನ್​ಗಳಿಗೆ ಕಟ್ಟಿ ಹಾಕಿ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿತು. ಎರಡನೇ ಇನ್ನಿಂಗ್ಸ್​ನಲ್ಲಿ ಭಾರತ ಬಾಟ್ಸ್ ಮೆನ್ ಗಳು ಭಾರೀ ರೈನ್ ಬಾರಿದರು.
ಜೈಸ್ವಾಲ್​ (161), ಕೆ.ಎಲ್.ರಾಹುಲ್​ (77) ರನ್​ ಗಳಿಸಿದರು. ಬಳಿಕ ವಿರಾಟ್​ ಕೊಹ್ಲಿ ಶತಕ ಸಿಡಿಸುತ್ತಿದ್ದಂತೆ ಭಾರತ 487/6 ರನ್‌ಗಳಿಗೆ ಡಿಕ್ಲೇರ್​ ಮಾಡಿಕೊಂಡಿತ್ತು. ಇದರೊಂದಿಗೆ ಭಾರತ 534 ರನ್‌ಗಳ ಬೃಹತ್​ ಗುರಿ ನೀಡಿತು. ಆಸೀಸ್​ ಪಡೆ 17 ರನ್​ಗಳಿಗೆ ಪ್ರಮುಖ ನಾಲ್ಕು ವಿಕೆಟ್​ ಕಳೆದುಕೊಂಡಿತು. ಆರಂಭಿಕ​ ಬ್ಯಾಟ್ಸ್ ಮೆನ್ ಮೆಕ್​ಸ್ವೀನಿ ಶೂನ್ಯಕ್ಕೆ ನಿರ್ಗಮಿಸಿದರೆ, ಪ್ಯಾಟ್​ ಕಮಿನ್ಸ್​ 2, ಲಬೋಶ್ಚಗೇನೆ 3 ರನ್‌ಗಳಿಗೆ ನಿರ್ಗಮಿಸಿದರು. ಇದರೊಂದಿಗೆ ಆಸ್ಟ್ರೇಲಿಯಾ 3ನೇ ದಿನದಾಟಕ್ಕೆ 12 ರನ್​ಗಳಿಗೆ 3 ವಿಕೆಟ್​ ಕಳೆದುಕೊಂಡಿತು. ನಾಲ್ಕನೇ ದಿನ ಕೂಡಾ ಬ್ಯಾಟಿಂಗ್​ ವೈಫಲ್ಯ ಅನುಭವಿಸಿದ ಕಾಂಗರೂ ಪಡೆ ಉಳಿದ 7 ವಿಕೆಟ್​ಗಳನ್ನು ಕಳೆದುಕೊಂಡು ಹೀನಾಯ ಪರಾಭವ ಕಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು