7:59 AM Thursday13 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

ಬೋಟ್ ನಿಂದ ಬಿದ್ದು ನಾಪತ್ತೆಯಾಗಿದ್ದ ಮೀನುಗಾರ: ಮೃತದೇಹ ಕಾಪು ಬಳಿ ಸಮುದ್ರದಲ್ಲಿ ಪತ್ತೆ

07/01/2023, 19:40

ಉಡುಪಿ(reporterkarnataka.com):ಮೀನುಗಾರಿಕಾ ಬೋಟ್ ನಿಂದ ಸಮುದ್ರಕ್ಕೆ ಬಿದ್ದು
ನಾಪತ್ತೆಯಾಗಿದ್ದ ಮೀನುಗಾರನೋರ್ವ ಮೃತದೇಹ ಕಾಪು ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ಮೃತರನ್ನು ಪೆರುವಾಯಿ ಗ್ರಾಮದ ಆನಂದ(36) ಎಂದು ಗುರುತಿಸಲಾಗಿದೆ. ಇವರು ಮಂಗಳೂರು ಬಂದರಿನಲ್ಲಿ ಸಾಯಿ ಪ್ರೇಮ್‌ ಕುಂದರ ಅವರ ಬೋಟ್‌ನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು. ಎಂದಿನಂತೆ ಜ.3ರಂದು ಆನಂದ ಅವರು ಮೀನುಗಾರಿಕೆಗೆ ಬೋಟ್ ನಲ್ಲಿ ತೆರಳಿದ್ದರು. ಬಳಿಕ ಬೋಟ್ ದಡಕ್ಕೆ ಬಂದು ನಿಂತುಕೊಂಡಿತ್ತು. ಈ ವೇಳೆ ಆನಂದ ಅವರ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದರು.‌ಎಷ್ಟು ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ.
ಜ.6ರಂದು ಕಾಪು ಬಳಿ ಸಮುದ್ರದಲ್ಲಿ ವ್ಯಕ್ತಿ ಮೃತದೇಹ ಸಿಕ್ಕಿದ್ದು, ಬಳಿಕ ಅದನ್ನು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿದಲ್ಲಿ ಇರಿಸಲಾಗಿತ್ತು. ಸಮುದ್ರದಲ್ಲಿ ಮೃತದೇಹ ಸಿಕ್ಕಿರುವ ಬಗ್ಗೆ ನಾಪತ್ತೆಯಾಗಿದ್ದ ಆನಂದ ಅವರ ಪತ್ನಿಗೂ ಮಾಹಿತಿ‌ ನೀಡಲಾಗಿತ್ತು. ಅವರು ಸಂಬಂಧಿಕರೊಂದಿಗೆ ಬಂದು ನೋಡಿದಾಗ ಮೃತದೇಹವೂ ಗಂಡ ಆನಂದ ಅವರದೆಂದು ದೃಢಪಟ್ಟಿದೆ. ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು