5:27 AM Sunday28 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ಬೋಟ್ ನಿಂದ ಬಿದ್ದು ನಾಪತ್ತೆಯಾಗಿದ್ದ ಮೀನುಗಾರ: ಮೃತದೇಹ ಕಾಪು ಬಳಿ ಸಮುದ್ರದಲ್ಲಿ ಪತ್ತೆ

07/01/2023, 19:40

ಉಡುಪಿ(reporterkarnataka.com):ಮೀನುಗಾರಿಕಾ ಬೋಟ್ ನಿಂದ ಸಮುದ್ರಕ್ಕೆ ಬಿದ್ದು
ನಾಪತ್ತೆಯಾಗಿದ್ದ ಮೀನುಗಾರನೋರ್ವ ಮೃತದೇಹ ಕಾಪು ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ಮೃತರನ್ನು ಪೆರುವಾಯಿ ಗ್ರಾಮದ ಆನಂದ(36) ಎಂದು ಗುರುತಿಸಲಾಗಿದೆ. ಇವರು ಮಂಗಳೂರು ಬಂದರಿನಲ್ಲಿ ಸಾಯಿ ಪ್ರೇಮ್‌ ಕುಂದರ ಅವರ ಬೋಟ್‌ನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು. ಎಂದಿನಂತೆ ಜ.3ರಂದು ಆನಂದ ಅವರು ಮೀನುಗಾರಿಕೆಗೆ ಬೋಟ್ ನಲ್ಲಿ ತೆರಳಿದ್ದರು. ಬಳಿಕ ಬೋಟ್ ದಡಕ್ಕೆ ಬಂದು ನಿಂತುಕೊಂಡಿತ್ತು. ಈ ವೇಳೆ ಆನಂದ ಅವರ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದರು.‌ಎಷ್ಟು ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ.
ಜ.6ರಂದು ಕಾಪು ಬಳಿ ಸಮುದ್ರದಲ್ಲಿ ವ್ಯಕ್ತಿ ಮೃತದೇಹ ಸಿಕ್ಕಿದ್ದು, ಬಳಿಕ ಅದನ್ನು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿದಲ್ಲಿ ಇರಿಸಲಾಗಿತ್ತು. ಸಮುದ್ರದಲ್ಲಿ ಮೃತದೇಹ ಸಿಕ್ಕಿರುವ ಬಗ್ಗೆ ನಾಪತ್ತೆಯಾಗಿದ್ದ ಆನಂದ ಅವರ ಪತ್ನಿಗೂ ಮಾಹಿತಿ‌ ನೀಡಲಾಗಿತ್ತು. ಅವರು ಸಂಬಂಧಿಕರೊಂದಿಗೆ ಬಂದು ನೋಡಿದಾಗ ಮೃತದೇಹವೂ ಗಂಡ ಆನಂದ ಅವರದೆಂದು ದೃಢಪಟ್ಟಿದೆ. ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು