12:51 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಬೋಟ್ ನಿಂದ ಬಿದ್ದು ನಾಪತ್ತೆಯಾಗಿದ್ದ ಮೀನುಗಾರ: ಮೃತದೇಹ ಕಾಪು ಬಳಿ ಸಮುದ್ರದಲ್ಲಿ ಪತ್ತೆ

07/01/2023, 19:40

ಉಡುಪಿ(reporterkarnataka.com):ಮೀನುಗಾರಿಕಾ ಬೋಟ್ ನಿಂದ ಸಮುದ್ರಕ್ಕೆ ಬಿದ್ದು
ನಾಪತ್ತೆಯಾಗಿದ್ದ ಮೀನುಗಾರನೋರ್ವ ಮೃತದೇಹ ಕಾಪು ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ಮೃತರನ್ನು ಪೆರುವಾಯಿ ಗ್ರಾಮದ ಆನಂದ(36) ಎಂದು ಗುರುತಿಸಲಾಗಿದೆ. ಇವರು ಮಂಗಳೂರು ಬಂದರಿನಲ್ಲಿ ಸಾಯಿ ಪ್ರೇಮ್‌ ಕುಂದರ ಅವರ ಬೋಟ್‌ನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು. ಎಂದಿನಂತೆ ಜ.3ರಂದು ಆನಂದ ಅವರು ಮೀನುಗಾರಿಕೆಗೆ ಬೋಟ್ ನಲ್ಲಿ ತೆರಳಿದ್ದರು. ಬಳಿಕ ಬೋಟ್ ದಡಕ್ಕೆ ಬಂದು ನಿಂತುಕೊಂಡಿತ್ತು. ಈ ವೇಳೆ ಆನಂದ ಅವರ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದರು.‌ಎಷ್ಟು ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ.
ಜ.6ರಂದು ಕಾಪು ಬಳಿ ಸಮುದ್ರದಲ್ಲಿ ವ್ಯಕ್ತಿ ಮೃತದೇಹ ಸಿಕ್ಕಿದ್ದು, ಬಳಿಕ ಅದನ್ನು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿದಲ್ಲಿ ಇರಿಸಲಾಗಿತ್ತು. ಸಮುದ್ರದಲ್ಲಿ ಮೃತದೇಹ ಸಿಕ್ಕಿರುವ ಬಗ್ಗೆ ನಾಪತ್ತೆಯಾಗಿದ್ದ ಆನಂದ ಅವರ ಪತ್ನಿಗೂ ಮಾಹಿತಿ‌ ನೀಡಲಾಗಿತ್ತು. ಅವರು ಸಂಬಂಧಿಕರೊಂದಿಗೆ ಬಂದು ನೋಡಿದಾಗ ಮೃತದೇಹವೂ ಗಂಡ ಆನಂದ ಅವರದೆಂದು ದೃಢಪಟ್ಟಿದೆ. ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು