10:01 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಬೋಟ್ ನಿಂದ ಬಿದ್ದು ನಾಪತ್ತೆಯಾಗಿದ್ದ ಮೀನುಗಾರ: ಮೃತದೇಹ ಕಾಪು ಬಳಿ ಸಮುದ್ರದಲ್ಲಿ ಪತ್ತೆ

07/01/2023, 19:40

ಉಡುಪಿ(reporterkarnataka.com):ಮೀನುಗಾರಿಕಾ ಬೋಟ್ ನಿಂದ ಸಮುದ್ರಕ್ಕೆ ಬಿದ್ದು
ನಾಪತ್ತೆಯಾಗಿದ್ದ ಮೀನುಗಾರನೋರ್ವ ಮೃತದೇಹ ಕಾಪು ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ಮೃತರನ್ನು ಪೆರುವಾಯಿ ಗ್ರಾಮದ ಆನಂದ(36) ಎಂದು ಗುರುತಿಸಲಾಗಿದೆ. ಇವರು ಮಂಗಳೂರು ಬಂದರಿನಲ್ಲಿ ಸಾಯಿ ಪ್ರೇಮ್‌ ಕುಂದರ ಅವರ ಬೋಟ್‌ನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು. ಎಂದಿನಂತೆ ಜ.3ರಂದು ಆನಂದ ಅವರು ಮೀನುಗಾರಿಕೆಗೆ ಬೋಟ್ ನಲ್ಲಿ ತೆರಳಿದ್ದರು. ಬಳಿಕ ಬೋಟ್ ದಡಕ್ಕೆ ಬಂದು ನಿಂತುಕೊಂಡಿತ್ತು. ಈ ವೇಳೆ ಆನಂದ ಅವರ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದರು.‌ಎಷ್ಟು ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ.
ಜ.6ರಂದು ಕಾಪು ಬಳಿ ಸಮುದ್ರದಲ್ಲಿ ವ್ಯಕ್ತಿ ಮೃತದೇಹ ಸಿಕ್ಕಿದ್ದು, ಬಳಿಕ ಅದನ್ನು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿದಲ್ಲಿ ಇರಿಸಲಾಗಿತ್ತು. ಸಮುದ್ರದಲ್ಲಿ ಮೃತದೇಹ ಸಿಕ್ಕಿರುವ ಬಗ್ಗೆ ನಾಪತ್ತೆಯಾಗಿದ್ದ ಆನಂದ ಅವರ ಪತ್ನಿಗೂ ಮಾಹಿತಿ‌ ನೀಡಲಾಗಿತ್ತು. ಅವರು ಸಂಬಂಧಿಕರೊಂದಿಗೆ ಬಂದು ನೋಡಿದಾಗ ಮೃತದೇಹವೂ ಗಂಡ ಆನಂದ ಅವರದೆಂದು ದೃಢಪಟ್ಟಿದೆ. ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು