2:46 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಬೋಟ್ ನಿಂದ ಬಿದ್ದು ನಾಪತ್ತೆಯಾಗಿದ್ದ ಮೀನುಗಾರ: ಮೃತದೇಹ ಕಾಪು ಬಳಿ ಸಮುದ್ರದಲ್ಲಿ ಪತ್ತೆ

07/01/2023, 19:40

ಉಡುಪಿ(reporterkarnataka.com):ಮೀನುಗಾರಿಕಾ ಬೋಟ್ ನಿಂದ ಸಮುದ್ರಕ್ಕೆ ಬಿದ್ದು
ನಾಪತ್ತೆಯಾಗಿದ್ದ ಮೀನುಗಾರನೋರ್ವ ಮೃತದೇಹ ಕಾಪು ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ಮೃತರನ್ನು ಪೆರುವಾಯಿ ಗ್ರಾಮದ ಆನಂದ(36) ಎಂದು ಗುರುತಿಸಲಾಗಿದೆ. ಇವರು ಮಂಗಳೂರು ಬಂದರಿನಲ್ಲಿ ಸಾಯಿ ಪ್ರೇಮ್‌ ಕುಂದರ ಅವರ ಬೋಟ್‌ನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು. ಎಂದಿನಂತೆ ಜ.3ರಂದು ಆನಂದ ಅವರು ಮೀನುಗಾರಿಕೆಗೆ ಬೋಟ್ ನಲ್ಲಿ ತೆರಳಿದ್ದರು. ಬಳಿಕ ಬೋಟ್ ದಡಕ್ಕೆ ಬಂದು ನಿಂತುಕೊಂಡಿತ್ತು. ಈ ವೇಳೆ ಆನಂದ ಅವರ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದರು.‌ಎಷ್ಟು ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ.
ಜ.6ರಂದು ಕಾಪು ಬಳಿ ಸಮುದ್ರದಲ್ಲಿ ವ್ಯಕ್ತಿ ಮೃತದೇಹ ಸಿಕ್ಕಿದ್ದು, ಬಳಿಕ ಅದನ್ನು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿದಲ್ಲಿ ಇರಿಸಲಾಗಿತ್ತು. ಸಮುದ್ರದಲ್ಲಿ ಮೃತದೇಹ ಸಿಕ್ಕಿರುವ ಬಗ್ಗೆ ನಾಪತ್ತೆಯಾಗಿದ್ದ ಆನಂದ ಅವರ ಪತ್ನಿಗೂ ಮಾಹಿತಿ‌ ನೀಡಲಾಗಿತ್ತು. ಅವರು ಸಂಬಂಧಿಕರೊಂದಿಗೆ ಬಂದು ನೋಡಿದಾಗ ಮೃತದೇಹವೂ ಗಂಡ ಆನಂದ ಅವರದೆಂದು ದೃಢಪಟ್ಟಿದೆ. ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು