ಇತ್ತೀಚಿನ ಸುದ್ದಿ
*ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ*
12/07/2026, 22:12
ಕೊಡ್ಲಿಪೇಟೆ(reporterkarnataka.com): ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಗಳ ಶವಗಳು 1 ಕಿ.ಮೀ ದೂರದಲ್ಲಿ ಪತ್ತೆಯಾಗಿದೆ. ಕಳೆದ ಗುರುವಾರ ಮೀನು ಹಿಡಿಯಲು ಹೋಗಿದ್ದ ನಾಗರಾಜು ಮತ್ತು ಶಿವರಾಜು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು
ಘಟನಾ ದಿನದಿಂದ NDRF ನಿರಂತರ ಶೋಧ ಕಾರ್ಯ ನಡೆಸಿದ್ದು ಇಂದು ಬೆಳಗ್ಗೆ ಒಂದು ಕಿಲೋಮೀಟರ್ ದೂರದ ದಲ್ಲಿ ಮೃತ ದೇಹಗಳು ಪತ್ತೆಯಾಗಿದ್ದು,ಹೊರತೆಗೆದು ಕೊಡ್ಲಿಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು.













