1:44 PM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಬೊಕ್ಕಪಟ್ಣ ಬೆಂಗ್ರೆ: 80 ಲಕ್ಷ ವೆಚ್ಚದಲ್ಲಿ ರಸ್ತೆಗೆ ಸಂರಕ್ಷಣಾ ತಡೆಗೋಡೆ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಚಾಲನೆ

17/11/2022, 18:52

ಮಂಗಳೂರು(reporterkarnataka.com) ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಣಂಬೂರು ಬೆಂಗ್ರೆ ವಾರ್ಡಿನ ಬೊಕ್ಕಪಟ್ಣ ಬೆಂಗ್ರೆಯಲ್ಲಿ 80 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆಗೆ ಸಂರಕ್ಷಣಾ ತಡೆಗೋಡೆ ನಿರ್ಮಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಂಗ್ರೆ ಪ್ರದೇಶವು ನಗರಕ್ಕಿಂತ ಭಿನ್ನವಾಗಿರುವ ಕಾರಣ ಹೆಚ್ಚಿನ ಅಭಿವೃದ್ಧಿಯ ಅಗತ್ಯವಿದೆ. ಈಗಾಗಲೇ ಬೆಂಗ್ರೆಯ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ರೂಪಿಸಲಾಗಿದ್ದು ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಮತ್ತಷ್ಟು ಅನುದಾನಗಳನ್ನು ಒದಗಿಸಿ ಸಾರ್ವಜನಿಕರ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ.

ಬೊಕ್ಕಪಟ್ಣ ಬೆಂಗ್ರೆಯ ಗುರುಪುರ ನದಿಯ ಪಶ್ಚಿಮ ದಂಡೆಯಲ್ಲಿರುವ ರಸ್ತೆಗೆ ಸಂರಕ್ಷಣಾ ತಡೆಗೋಡೆ ನಿರ್ಮಿಸುವ ಕುರಿತು ಸ್ಥಳೀಯ ಕಾರ್ಪೋರೇಟರ್ ಹಾಗೂ ಕಾರ್ಯಕರ್ತರ ಬೇಡಿಕೆಯಂತೆ ಕಾಮಗಾರಿಗೆ 80 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ತಕ್ಷಣವೇ ಕಾಮಗಾರಿ ಪ್ರಾರಂಭಿಸುವಂತೆ ಅಧ್ಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬೆಂಗ್ರೆ ಪರಿಸರದ ಜನರು ನಗರವನ್ನು ಸಂಪರ್ಕಿಸಲು ವಿನೂತನ ಯೋಜನೆಗಳನ್ನು ರೂಪಿಸಲಾಗಿದ್ದು ಮುಂಬರುವ ದಿನಗಳಲ್ಲಿ ಈ ಭಾಗದ ಜನರ ಬಹುಕಾಲದ ಬೇಡಿಕೆ ಈಡೇರಿಸುವ ಭರವಸೆ ನೀಡುತ್ತೇನೆ ಎಂದು ಹೇಳಿದರು.

ಅನುದಾನ ಬಿಡುಗಡೆಗೊಳಿಸಿದ ಶಾಸಕ ವೇದವ್ಯಾಸ್ ಕಾಮತ್ ಅವರನ್ನು ಸ್ಥಳೀಯ ನಿವಾಸಿಗಳು ಸನ್ಮಾನಿಸಿ ಧನ್ಯವಾದಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಸ್ಥಳೀಯ ಕಾರ್ಪೋರೇಟರ್ ಸುನಿತಾ, ಮುಖಂಡರಾದ ಅರವಿಂದ್ ಬೆಂಗ್ರೆ, ವರದರಾಜ್, ಮಿಲನ್, ಯತೀಶ್, ಅಶ್ವತ್ಥಾಮ, ಪ್ರಸಾದ್, ಅಜಯ್, ನವೀನ್, ಭರತ್, ಪ್ರವೀಣ್, ಸುಧಾಕರ್, ವಸಂತ್ ಜೆ ಪೂಜಾರಿ, ಪ್ರಕಾಶ್, ಭಾಸ್ಕರ್, ಶ್ರೀಧರ್, ಭಾಗೀರಥಿ, ಸುನಂದಾ, ಸೂರ್ಯಕಾಂತ್, ಪ್ರಜ್ವಲ್, ಸುಧೀರ್, ಸೂರಜ್, ದಾಕ್ಷಾಯಿಣಿ, ಶ್ರೀನಿವಾಸ್, ವಿನಯ್, ನವೀನ್ ಪುತ್ರನ್, ಸೀಮಾ, ಚಂಪಾ, ಶಶಿಕಲಾ, ಲೀಲಾವತಿ, ಮನೋಜ್, ಅನಿಲ್ ಕಾಂಚನ್, ಅನಿಲ್ ಕರ್ಕೇರ, ದಯಾನಂದ್, ಕಿರಣ್, ಮುತ್ತಮ್ಮ, ವಿಶಾಲಾಕ್ಷಿ, ಜನಾರ್ದನ್, ವಿಶಾಲ್, ಶೇಖರ್, ಸುರೇಖಾ, ರಮ್ಯಾ, ಪಾರ್ವತಿ, ಶ್ರೀಕಾಂತ್, ಚಂದ್ರ ಶೇಖರ್, ರಾಜೇಶ್ ಮತ್ತಿತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು