8:05 PM Thursday6 - March 2025
ಬ್ರೇಕಿಂಗ್ ನ್ಯೂಸ್
Womens Day | ಮಹಿಳಾಸ್ನೇಹಿ ಗ್ರಾಪಂ ಅಭಿಯಾನ, ಮಹಿಳಾ ಗ್ರಾಮಸಭೆ: ಮಾರ್ಚ್‌ 8… Protest | ಹಕ್ಕುಪತ್ರಕ್ಕಾಗಿ ಪಾದಯಾತ್ರೆ: ಗ್ರಾಮದ ನ್ಯಾಯಕ್ಕಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ಏಕಾಂಗಿ… Budget Session | 26 ಲಕ್ಷ ನಕಲಿ ಕಾರ್ಡ್ ಗಳ ರದ್ದು: ಸದನದಲ್ಲಿ… Budget Session | ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ಸಮಿತಿ… Forest Minister | ವಾಯುಪಡೆ ಸ್ವಾಧೀನದ ಪೀಣ್ಯ, ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ: ಸಚಿವ… Budget Session | ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಎಲ್ಲ… Yakshagana | ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಅನುಮತಿ ಸರಳಗೊಳಿಸಲಾಗುವುದು: ಡಿಸಿಎಂ ಡಿ.ಕೆ.ಶಿವಕುಮಾರ್ Budget Session | ಅನಿಲ ವಿತರಣೆ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮ: ಸಚಿವ… Budget Session | ಸ್ಮಾರ್ಟ್ ಸಿಟಿ ಯೋಜನೆ ಅವ್ಯವಹಾರಗಳ ಬಗ್ಗೆ ಅಗತ್ಯ ಕ್ರಮ:… Legislative Assembly | ಕರಾವಳಿ ಕರ್ನಾಟಕದ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು: ಬೈಂದೂರು ಶಾಸಕರ…

ಇತ್ತೀಚಿನ ಸುದ್ದಿ

Bollywood Actress | ಬಾಲಿವುಡ್ ನಟಿ, ಸಂಸದೆ ಕಂ ಗನಾ ರಣಾವತ್ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ

04/03/2025, 19:36

ಮಂಗಳೂರು(reporterkarnataka.com): ಖ್ಯಾತ ಬಾಲಿವುಡ್ ನಟಿ, ಸಂಸದೆ ಕಂಗನಾ ರಣಾವತ್ ಇಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯ ಹಾಗೂ ಕಾಪು ಮಾರಿಗುಡಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ನಟಿ,
ನಿನ್ನೆ ಕಾಪು ಮಾರಿಗುಡಿ ಹಾಗೂ ಇಂದು ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದೇನೆ. ತಾಯಿಯ ದರ್ಶನ ಪಡೆದಿದ್ದೇನೆ. ಬಹಳ ವರ್ಷಗಳಿಂದ ಈ ಭಾಗಕ್ಕೆ ಬರಬೇಕೆಂಬ ಅಭಿಲಾಷೆ ಇತ್ತು.
ತಾಯಿ ತನ್ನ ಆಶೀರ್ವಾದ ನೀಡಲು ಕರೆಸಿಕೊಂಡಿದ್ದಾಳೆ.
ಸನಾತನ ಧರ್ಮ ಸನಾತನ ಸಂಸ್ಕೃತಿಯ ಬಗ್ಗೆ ಜಾಗೃತಿ ಯಾಗಿದೆ. ದೇಶ ಉನ್ನತ ಪ್ರಗತಿಯತ್ತ ಸಾಗುತ್ತಿದೆ.
ನಮ್ಮ‌ ಸನಾತನ ಧರ್ಮದ ಬಗ್ಗೆ ಜನರು ಜಾಗೃತರಾಗಿದ್ದಾರೆ ಎಂದರು.
ನಮ್ಮ ದೇವಾಲಯಗಳು ಕೇವಲ ದೇವರ ಆಲಯವಾಗಿ ಉಳಿದಿಲ್ಲ. ನಮ್ಮ ದೇವಾಲಯಗಳು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ.
ಆಸ್ಪತ್ರೆ, ಶಾಲೆ, ಆಶ್ರಮಗಳನ್ನು ನಡೆಸುತ್ತಿದೆ. ದೇವಾಲಯಗಳು ನಮ್ಮ ಸಾಂಸ್ಕೃತಿಕ ಪ್ರತಿಬಿಂಬ.
ಕುಂಭಮೇಳ, ಸನಾತನ ಧರ್ಮದ ಬಗ್ಗೆ ಅವಹೇಳನ‌ ಟೀಕೆಗಳು ಮುಂದುವರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು,ವ
ದೇವರ ಆರತಿ ಬೆಳಗುವಾಗ ದುಷ್ಟ ಶಕ್ತಿಗಳು ಉರಿದು ಹೋಗುತ್ತವೆ. ದೇವಿಯ ಅವತಾರಗಳು ಈ ದುಷ್ಟ‌ ಶಕ್ತಿಗಳ ಸಂಹಾರಕ್ಕೆ ಆಗಿವೆ.
ಎಲ್ಲರ ಮೇಲೂ ಈಶ್ವರನ ಆಶೀರ್ವಾದವಿರಲಿ. ಟೀಕೆ ಮಾಡುವವರಿಗೆ, ಅವಹೇಳನ ಮಾಡಿದವರಿಗೆ ದೇವರು ಸದ್ಬುದ್ದಿ ಕೊಡಲಿ ಎಂದು ನಟಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು