8:23 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Bollywood Actress | ಬಾಲಿವುಡ್ ನಟಿ, ಸಂಸದೆ ಕಂ ಗನಾ ರಣಾವತ್ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ

04/03/2025, 19:36

ಮಂಗಳೂರು(reporterkarnataka.com): ಖ್ಯಾತ ಬಾಲಿವುಡ್ ನಟಿ, ಸಂಸದೆ ಕಂಗನಾ ರಣಾವತ್ ಇಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯ ಹಾಗೂ ಕಾಪು ಮಾರಿಗುಡಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ನಟಿ,
ನಿನ್ನೆ ಕಾಪು ಮಾರಿಗುಡಿ ಹಾಗೂ ಇಂದು ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದೇನೆ. ತಾಯಿಯ ದರ್ಶನ ಪಡೆದಿದ್ದೇನೆ. ಬಹಳ ವರ್ಷಗಳಿಂದ ಈ ಭಾಗಕ್ಕೆ ಬರಬೇಕೆಂಬ ಅಭಿಲಾಷೆ ಇತ್ತು.
ತಾಯಿ ತನ್ನ ಆಶೀರ್ವಾದ ನೀಡಲು ಕರೆಸಿಕೊಂಡಿದ್ದಾಳೆ.
ಸನಾತನ ಧರ್ಮ ಸನಾತನ ಸಂಸ್ಕೃತಿಯ ಬಗ್ಗೆ ಜಾಗೃತಿ ಯಾಗಿದೆ. ದೇಶ ಉನ್ನತ ಪ್ರಗತಿಯತ್ತ ಸಾಗುತ್ತಿದೆ.
ನಮ್ಮ‌ ಸನಾತನ ಧರ್ಮದ ಬಗ್ಗೆ ಜನರು ಜಾಗೃತರಾಗಿದ್ದಾರೆ ಎಂದರು.
ನಮ್ಮ ದೇವಾಲಯಗಳು ಕೇವಲ ದೇವರ ಆಲಯವಾಗಿ ಉಳಿದಿಲ್ಲ. ನಮ್ಮ ದೇವಾಲಯಗಳು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ.
ಆಸ್ಪತ್ರೆ, ಶಾಲೆ, ಆಶ್ರಮಗಳನ್ನು ನಡೆಸುತ್ತಿದೆ. ದೇವಾಲಯಗಳು ನಮ್ಮ ಸಾಂಸ್ಕೃತಿಕ ಪ್ರತಿಬಿಂಬ.
ಕುಂಭಮೇಳ, ಸನಾತನ ಧರ್ಮದ ಬಗ್ಗೆ ಅವಹೇಳನ‌ ಟೀಕೆಗಳು ಮುಂದುವರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು,ವ
ದೇವರ ಆರತಿ ಬೆಳಗುವಾಗ ದುಷ್ಟ ಶಕ್ತಿಗಳು ಉರಿದು ಹೋಗುತ್ತವೆ. ದೇವಿಯ ಅವತಾರಗಳು ಈ ದುಷ್ಟ‌ ಶಕ್ತಿಗಳ ಸಂಹಾರಕ್ಕೆ ಆಗಿವೆ.
ಎಲ್ಲರ ಮೇಲೂ ಈಶ್ವರನ ಆಶೀರ್ವಾದವಿರಲಿ. ಟೀಕೆ ಮಾಡುವವರಿಗೆ, ಅವಹೇಳನ ಮಾಡಿದವರಿಗೆ ದೇವರು ಸದ್ಬುದ್ದಿ ಕೊಡಲಿ ಎಂದು ನಟಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು