6:34 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಬೋಳೂರಿನಲ್ಲಿ ಮಹಿಳೆಯರಿಗೆ ಬೃಹತ್ ಆರೋಗ್ಯ ಮೇಳ: ತಜ್ಞ ವೈದ್ಯರಿಂದ ತಪಾಸಣೆ

19/03/2023, 00:02

ಮಂಗಳೂರು(reporterkarnataka.com): ನಗರದ ಬೋಳೂರಿನಲ್ಲಿರುವ ಅಮೃತ ವಿದ್ಯಾಲಯದ ಆವರಣದಲ್ಲಿ ಭಾನುವಾರ ಮಾರ್ಚ್ 19ರಂದು ಮಹಿಳೆಯರಿಗೆ ಬೃಹತ್ ಉಚಿತ ಆರೋಗ್ಯ ಮೇಳ ಜರುಗಲಿದೆ.
ಅಮೃತ ಧ್ವನಿ, ಮಾತಾ ಅಮೃತಾನಂದಮಯಿ ಮಠದ ವತಿಯಿಂದ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ. ಕ.,
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಆಯುಷ್ ಇಲಾಖೆ , ದೇರಳಕಟ್ಟೆಯ ಏನಪೋಯ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜು ಹಾಗೂ ರೋಟರಿ ಕ್ಲಬ್ ಮಂಗಳೂರು ಉತ್ತರ ಇವರ ಸಂಯುಕ್ತ ಆಶ್ರಯದಲ್ಲಿ ವಿವಿಧ ತಜ್ಞ ವೈದ್ಯರು ಮತ್ತು ಆರೋಗ್ಯ ಸೇವಾರ್ಥಿಗಳು ಕಣ್ಣಿನ ಚಿಕಿತ್ಸೆ, ಹಲ್ಲಿನ ಚಿಕಿತ್ಸೆ, ಮಹಿಳೆಯರ ಆರೋಗ್ಯ ತಪಾಸಣೆ, ಅಸಾಂಕ್ರಾಮಿಕ ರೋಗಗಳು, ಕ್ಯಾನ್ಸರ್ ತಪಾಸಣೆ,( Mammography, Pap test) , ಹಿರಿಯ ನಾಗರಿಕರ ಆರೋಗ್ಯ ಸಮಸ್ಯೆಗಳು, ವಾತರೋಗ, ಶ್ವಾಸರೋಗ ಇತ್ಯಾದಿ ಪ್ರಮುಖ ಸಮಸ್ಯೆಗಳ ತಪಾಸಣೆ ನಡೆಸಿ ಚಿಕಿತ್ಸಾ ಸಲಹೆ ನೀಡಲಿರುವರು.
ಬೆಳಗ್ಗೆ 9.00 ರಿಂದ ಮಧ್ಯಾಹ್ನ1.00 ಗಂಟೆಯ ತನಕ ಈ ಸೇವೆ ಲಭಿಸಲಿದೆ. ಮಹಿಳೆಯರು ಇದರ ಪ್ರಯೋಜನ ಪಡೆಯುವಂತೆ ಮನವಿ.

ಇತ್ತೀಚಿನ ಸುದ್ದಿ

ಜಾಹೀರಾತು