8:12 PM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಬೊಮ್ಮಾಯಿ ಆರೆಸ್ಸೆಸ್ ಗೆ ಮಾತ್ರ ಮುಖ್ಯಮಂತ್ರಿಯಲ್ಲ; ಕೋಮುವಾದ ಮೂಲ ಬೇರು ಕರಾವಳಿ: ಮಾಜಿ ಸಿಎಂ ಸಿದ್ದರಾಮಯ್ಯ

06/01/2023, 13:23

ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರೆಸ್ಸೆಸ್ ಗೆ ಮಾತ್ರ ಮುಖ್ಯಮಂತ್ರಿಯಲ್ಲ. ರಾಜ್ಯದ 7 ಕೋಟಿ ಜನರ ಪ್ರತಿನಿಧಿ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಬೃಹತ್ ಸಾರ್ವಜನಿಕ ಜನಜಾಗೃತಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕೋಮುವಾದ ಮೂಲ ಬೇರು ಕರಾವಳಿ. ದೇಶದ ಸಂವಿಧಾನದ ಮೇಲೆ ವಿಶ್ವಾಸ ಇಲ್ಲದೇ ಇರುವವರು ಜನಪ್ರತಿನಿಧಿಗಳಾಗಲು ಅರ್ಹರಲ್ಲ ಎಂದರು.
ಕರಾವಳಿ ಕೋಮುವಾದದ ಪ್ರಯೋಗ ಶಾಲೆ ಆಗಿದೆ. ಎಲ್ಲ ಕಡೆಗಳಲ್ಲಿಯೂ ಹಿಂದೂತ್ವವನ್ನು ತರಲಾಗುತ್ತಿದೆ. ಯಕ್ಷಗಾನ ಕಲೆಗೂ ಹಿಂದೂತ್ವ ನಂಟು ಬೇಸೆಯುತ್ತಾರೆ. ಬಿಜೆಪಿ, ಆರ್ ಎಸ್ ಎಸ್ ಗೆ ಅದುವೇ ಬಂಡವಾಳ ಆಗಿಬಿಟ್ಟಿದೆ ಎಂದು ಹೇಳಿದರು.

ಸಂಸದ ಅನಂತ ಕುಮಾರ್ ಹೆಗಡೆ ಸಂವಿಧಾನ ಬದಲಾಯಿಸುತ್ತೇವೆ ಎಂದು ಬೊಬ್ಬೆ ಹಾಕಿದಾಗ ಮೋದಿ, ಅಮಿತ್ ಶಾ ಯಾವುದೇ ಕ್ರಮವನ್ನು ಕೈಗೊಳ್ಳಲಿಲ್ಲ. ಮೋದಿ, ಅಮಿತ್ ಷಾ‌ ಇಬ್ಬರು ಅನಂತ ಕುಮಾರ್ ಮೂಲಕ ಹೇಳಿಸಿದ್ದು ಅನ್ನೋದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ನುಡಿದರು.

ಪ್ರತಿಪಕ್ಷದ ಉಪ ನಾಯಕ, ಸ್ಥಳೀಯ ಶಾಸಕ ಯು.ಟಿ ಖಾದರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ,ಮಾಜಿ ಸಚಿವ ರಮಾನಾಥ ರೈ ಹಾಗೂ ಕಾಂಗ್ರೆಸ್ ಮುಖಂಡರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು