6:50 AM Tuesday24 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

ಬೊಮ್ಮಾಯಿ ಆರೆಸ್ಸೆಸ್ ಗೆ ಮಾತ್ರ ಮುಖ್ಯಮಂತ್ರಿಯಲ್ಲ; ಕೋಮುವಾದ ಮೂಲ ಬೇರು ಕರಾವಳಿ: ಮಾಜಿ ಸಿಎಂ ಸಿದ್ದರಾಮಯ್ಯ

06/01/2023, 13:23

ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರೆಸ್ಸೆಸ್ ಗೆ ಮಾತ್ರ ಮುಖ್ಯಮಂತ್ರಿಯಲ್ಲ. ರಾಜ್ಯದ 7 ಕೋಟಿ ಜನರ ಪ್ರತಿನಿಧಿ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಬೃಹತ್ ಸಾರ್ವಜನಿಕ ಜನಜಾಗೃತಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕೋಮುವಾದ ಮೂಲ ಬೇರು ಕರಾವಳಿ. ದೇಶದ ಸಂವಿಧಾನದ ಮೇಲೆ ವಿಶ್ವಾಸ ಇಲ್ಲದೇ ಇರುವವರು ಜನಪ್ರತಿನಿಧಿಗಳಾಗಲು ಅರ್ಹರಲ್ಲ ಎಂದರು.
ಕರಾವಳಿ ಕೋಮುವಾದದ ಪ್ರಯೋಗ ಶಾಲೆ ಆಗಿದೆ. ಎಲ್ಲ ಕಡೆಗಳಲ್ಲಿಯೂ ಹಿಂದೂತ್ವವನ್ನು ತರಲಾಗುತ್ತಿದೆ. ಯಕ್ಷಗಾನ ಕಲೆಗೂ ಹಿಂದೂತ್ವ ನಂಟು ಬೇಸೆಯುತ್ತಾರೆ. ಬಿಜೆಪಿ, ಆರ್ ಎಸ್ ಎಸ್ ಗೆ ಅದುವೇ ಬಂಡವಾಳ ಆಗಿಬಿಟ್ಟಿದೆ ಎಂದು ಹೇಳಿದರು.

ಸಂಸದ ಅನಂತ ಕುಮಾರ್ ಹೆಗಡೆ ಸಂವಿಧಾನ ಬದಲಾಯಿಸುತ್ತೇವೆ ಎಂದು ಬೊಬ್ಬೆ ಹಾಕಿದಾಗ ಮೋದಿ, ಅಮಿತ್ ಶಾ ಯಾವುದೇ ಕ್ರಮವನ್ನು ಕೈಗೊಳ್ಳಲಿಲ್ಲ. ಮೋದಿ, ಅಮಿತ್ ಷಾ‌ ಇಬ್ಬರು ಅನಂತ ಕುಮಾರ್ ಮೂಲಕ ಹೇಳಿಸಿದ್ದು ಅನ್ನೋದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ನುಡಿದರು.

ಪ್ರತಿಪಕ್ಷದ ಉಪ ನಾಯಕ, ಸ್ಥಳೀಯ ಶಾಸಕ ಯು.ಟಿ ಖಾದರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ,ಮಾಜಿ ಸಚಿವ ರಮಾನಾಥ ರೈ ಹಾಗೂ ಕಾಂಗ್ರೆಸ್ ಮುಖಂಡರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು