8:10 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬೊಮ್ಮಾಯಿ ಆರೆಸ್ಸೆಸ್ ಗೆ ಮಾತ್ರ ಮುಖ್ಯಮಂತ್ರಿಯಲ್ಲ; ಕೋಮುವಾದ ಮೂಲ ಬೇರು ಕರಾವಳಿ: ಮಾಜಿ ಸಿಎಂ ಸಿದ್ದರಾಮಯ್ಯ

06/01/2023, 13:23

ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರೆಸ್ಸೆಸ್ ಗೆ ಮಾತ್ರ ಮುಖ್ಯಮಂತ್ರಿಯಲ್ಲ. ರಾಜ್ಯದ 7 ಕೋಟಿ ಜನರ ಪ್ರತಿನಿಧಿ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಬೃಹತ್ ಸಾರ್ವಜನಿಕ ಜನಜಾಗೃತಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕೋಮುವಾದ ಮೂಲ ಬೇರು ಕರಾವಳಿ. ದೇಶದ ಸಂವಿಧಾನದ ಮೇಲೆ ವಿಶ್ವಾಸ ಇಲ್ಲದೇ ಇರುವವರು ಜನಪ್ರತಿನಿಧಿಗಳಾಗಲು ಅರ್ಹರಲ್ಲ ಎಂದರು.
ಕರಾವಳಿ ಕೋಮುವಾದದ ಪ್ರಯೋಗ ಶಾಲೆ ಆಗಿದೆ. ಎಲ್ಲ ಕಡೆಗಳಲ್ಲಿಯೂ ಹಿಂದೂತ್ವವನ್ನು ತರಲಾಗುತ್ತಿದೆ. ಯಕ್ಷಗಾನ ಕಲೆಗೂ ಹಿಂದೂತ್ವ ನಂಟು ಬೇಸೆಯುತ್ತಾರೆ. ಬಿಜೆಪಿ, ಆರ್ ಎಸ್ ಎಸ್ ಗೆ ಅದುವೇ ಬಂಡವಾಳ ಆಗಿಬಿಟ್ಟಿದೆ ಎಂದು ಹೇಳಿದರು.

ಸಂಸದ ಅನಂತ ಕುಮಾರ್ ಹೆಗಡೆ ಸಂವಿಧಾನ ಬದಲಾಯಿಸುತ್ತೇವೆ ಎಂದು ಬೊಬ್ಬೆ ಹಾಕಿದಾಗ ಮೋದಿ, ಅಮಿತ್ ಶಾ ಯಾವುದೇ ಕ್ರಮವನ್ನು ಕೈಗೊಳ್ಳಲಿಲ್ಲ. ಮೋದಿ, ಅಮಿತ್ ಷಾ‌ ಇಬ್ಬರು ಅನಂತ ಕುಮಾರ್ ಮೂಲಕ ಹೇಳಿಸಿದ್ದು ಅನ್ನೋದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ನುಡಿದರು.

ಪ್ರತಿಪಕ್ಷದ ಉಪ ನಾಯಕ, ಸ್ಥಳೀಯ ಶಾಸಕ ಯು.ಟಿ ಖಾದರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ,ಮಾಜಿ ಸಚಿವ ರಮಾನಾಥ ರೈ ಹಾಗೂ ಕಾಂಗ್ರೆಸ್ ಮುಖಂಡರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು