3:21 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಬೊಮ್ಮಾಯಿ ಸಂಪುಟ ರಚನೆಗೆ ಆ. 5ರಂದು ಮುಹೂರ್ತ ಫಿಕ್ಸ್?: ದ.ಕ.ಜಿಲ್ಲೆಯಿಂದ ಅಂಗಾರರಿಗೆ ಮತ್ತೆ ಸಚಿವ ಸ್ಥಾನ? 

01/08/2021, 21:06

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಚೊಚ್ಚಲ ಸಂಪುಟ ಆ. 5ರಂದು ಬಹುತೇಕ ರಚನೆಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಎಸ್. ಅಂಗಾರ ಅವರಿಗೆ ಮತ್ತೆ ಸಚಿವ ಪದವಿ ದೊರೆಯುವುದು ನಿಚ್ಚಳವಾಗಿದೆ. ಅದೇ ರೀತಿ ನೆರೆಯ ಉಡುಪಿ ಜಿಲ್ಲೆಯಿಂದ ಹೊಸ ಮುಖಗಳಿಗೆ ಅವಕಾಶ ಸಿಗಲಿದೆ ಎನ್ನಲಾಗಿದೆ.

ಬೊಮ್ಮಾಯಿ ಸಂಪುಟದಲ್ಲಿ ಮೂವರು ಡಿಸಿಎಂಗಳಿರುತ್ತಾರೆ. ಆರ್. ಅಶೋಕ್, ಗೋವಿಂದ ಕಾರಜೋಳ ಹಾಗೂ ಶ್ರೀರಾಮುಲು ಅವರಿಗೆ ಡಿಸಿಎಂ ಪಟ್ಟ ಒಲಿಯುವ ಸಾಧ್ಯತೆಗಳಿವೆ. ಸಂಘ ಪರಿವಾರದಿಂದ ಬಂದ, ಹಿರಿತನಕ್ಕೆ ಹೆಸರಾದ ಎಸ್ .ಅಂಗಾರ ಅವರಿಗೆ ಮತ್ತೊಮ್ಮೆ ಅವಕಾಶ ಲಭಿಸಲಿದೆ. ಸುರೇಶ್ ಕುಮಾರ್, ಮುರುಗೇಶ್ ನಿರಾಣಿ ಮತ್ತೆ ಮಂತ್ರಿ ಸ್ಥಾನ ಪಡೆಯಲಿದ್ದಾರೆ ಎನ್ನಲಾಗಿದೆ. ಹೊಸ ಮುಖಗಳಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ಶಾಸಕ ಸುನಿಲ್ ಕುಮಾರ್, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೊಡಗಿನ ಅಪ್ಪಚ್ಚು ರಂಜನ್, ಮೂಡುಗೆರೆಯ ಕುಮಾರಸ್ವಾಮಿ ಸೇರಿದ್ದಾರೆ ಎಂದು ತಿಳಿದು ಬಂದಿದೆ. ಮೈಸೂರಿನಿಂದ ಈ ಬಾರಿ ಎ. ರಾಮದಾಸ್ ಸಚಿವ ಸ್ಥಾನ ಪಡೆಯಲಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು