8:39 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಬೊಮ್ಮಾಯಿ ಸಂಪುಟದಲ್ಲಿ ಕರಾವಳಿಯ ಮೂವರಿಗೆ ಸ್ಥಾನ : ಸುನಿಲ್ ಕುಮಾರ್, ಕೋಟ ಹಾಗೂ ಅಂಗಾರ ಸಂಪುಟಕ್ಕೆ ಸೇರ್ಪಡೆ

04/08/2021, 12:55

ಬೆಂಗಳೂರು(ReporterKarnataka.com)

ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರಲು ಸಚಿವಾಕಾಂಕ್ಷಿಗಳ ಪಟ್ಟಿ ಅಂತಿಮಗೊಂಡಿದ್ದು, ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ ಬಹುತೇಕ ಖಚಿತ ಎನ್ನಲಾಗುತ್ತಿದೆ.

ಮುಖ್ಯಮಂತ್ರಿ ಬೊಮ್ಮಾಯಿ ದೆಹಲಿಯಲ್ಲಿ ಹೈ ಕಮಾಂಡ್​ ಭೇಟಿ ಮಾಡಿ ಸಚಿವರ ಪಟ್ಟಿ ಫೈನಲ್​​​ ಆದ ಬಳಿಕ ನಿನ್ನೆ ರಾತ್ರಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಬಳಿಕ ಸಚಿವ ಸ್ಥಾನ ಫಿಕ್ಸ್ ಆಗಿರುವ ಶಾಸಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸಿಎಂ ಈವರೆಗೆ ಒಟ್ಟು 29 ಶಾಸಕರಿಗೆ ಕರೆ ಮಾಡಿ ಸಚಿವ ಸ್ಥಾನ ನೀಡಿರುವ ವಿಷಯವನ್ನು ಖಚಿತಪಡಿಸಿದ್ದಾರೆ. ಇಂದು ಮಧ್ಯಾಹ್ನ 2.15ಕ್ಕೆ ರಾಜಭವನದಲ್ಲಿ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ಸಿಎಂ ನೇರವಾಗಿ ಕರೆ ಮಾಡಿ ಪ್ರಮಾಣ ವಚನಕ್ಕೆ ಆಹ್ವಾನ ನೀಡಿರುವ ಶಾಸಕರ ಪಟ್ಟಿಯಲ್ಲಿ
ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಅರವಿಂದ ಲಿಂಬಾವಳಿ, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಬಿ.ಶ್ರೀ ರಾಮುಲು, ಉಮೇಶ್ ಕತ್ತಿ, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಬೈರತಿ‌ ಬಸವರಾಜ, ಮುರುಗೇಶ್ ನಿರಾಣಿ, ಶಿವರಾಂ ಹೆಬ್ಬಾರ್, ಶಶಿಕಲಾ ಜೊಲ್ಲೆ, ಕೆಸಿ ನಾರಾಯಣ್ ಗೌಡ, ಸುನೀಲ್ ಕುಮಾರ್, ಅರಗ ಜ್ಞಾನೇಂದ್ರ, ಗೋವಿಂದ ಕಾರಜೋಳ, ಮುನಿರತ್ನ, ಎಂ.ಟಿ.ಬಿ ನಾಗರಾಜ್, ಗೋಪಾಲಯ್ಯ, ಮಾಧುಸ್ವಾಮಿ, ಹಾಲಪ್ಪ ಆಚಾರ್, ಶಂಕರ್ ಪಾಟೀಲ್ ಮುನೇನಕೊಪ್ಪ, ಕೋಟಾ ಶ್ರೀನಿವಾಸ ಪೂಜಾರಿ, ಪ್ರಭು ಚೌವ್ಹಾಣ್, ವಿ. ಸೋಮಣ್ಣ, ಎಸ್ ಅಂಗಾರ, ಆನಂದ್ ಸಿಂಗ್, ಸಿ ಸಿ‌ ಪಾಟೀಲ್, ಬಿ.ಸಿ. ನಾಗೇಶ್ ಇದ್ದಾರೆ.

ಹಳೆಯ ಒಟ್ಟು ಏಳು ಮಂದಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಆರ್.ಶಂಕರ್, ಸಿ.ಪಿ.ಯೋಗೇಶ್ವರ್, ಅರವಿಂದ್ ಲಿಂಬಾವಳಿ, ಶ್ರೀಮಂತ ಪಾಟೀಲ್, ಸುರೇಶ್ ಕುಮಾರ್, ಜಗದೀಶ್ ಶೆಟ್ಟರ್ ಮತ್ತು ಲಕ್ಷಣ ಸವದಿಗೆ ಈ ಬಾರಿ ಮಂತ್ರಿ ಸ್ಥಾನವಿಲ್ಲ

ಇತ್ತೀಚಿನ ಸುದ್ದಿ

ಜಾಹೀರಾತು