1:15 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಬೊಮ್ಮಾಯಿ ಸಂಪುಟದಲ್ಲಿ ಕರಾವಳಿಯ ಮೂವರಿಗೆ ಸ್ಥಾನ : ಸುನಿಲ್ ಕುಮಾರ್, ಕೋಟ ಹಾಗೂ ಅಂಗಾರ ಸಂಪುಟಕ್ಕೆ ಸೇರ್ಪಡೆ

04/08/2021, 12:55

ಬೆಂಗಳೂರು(ReporterKarnataka.com)

ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರಲು ಸಚಿವಾಕಾಂಕ್ಷಿಗಳ ಪಟ್ಟಿ ಅಂತಿಮಗೊಂಡಿದ್ದು, ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ ಬಹುತೇಕ ಖಚಿತ ಎನ್ನಲಾಗುತ್ತಿದೆ.

ಮುಖ್ಯಮಂತ್ರಿ ಬೊಮ್ಮಾಯಿ ದೆಹಲಿಯಲ್ಲಿ ಹೈ ಕಮಾಂಡ್​ ಭೇಟಿ ಮಾಡಿ ಸಚಿವರ ಪಟ್ಟಿ ಫೈನಲ್​​​ ಆದ ಬಳಿಕ ನಿನ್ನೆ ರಾತ್ರಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಬಳಿಕ ಸಚಿವ ಸ್ಥಾನ ಫಿಕ್ಸ್ ಆಗಿರುವ ಶಾಸಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸಿಎಂ ಈವರೆಗೆ ಒಟ್ಟು 29 ಶಾಸಕರಿಗೆ ಕರೆ ಮಾಡಿ ಸಚಿವ ಸ್ಥಾನ ನೀಡಿರುವ ವಿಷಯವನ್ನು ಖಚಿತಪಡಿಸಿದ್ದಾರೆ. ಇಂದು ಮಧ್ಯಾಹ್ನ 2.15ಕ್ಕೆ ರಾಜಭವನದಲ್ಲಿ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ಸಿಎಂ ನೇರವಾಗಿ ಕರೆ ಮಾಡಿ ಪ್ರಮಾಣ ವಚನಕ್ಕೆ ಆಹ್ವಾನ ನೀಡಿರುವ ಶಾಸಕರ ಪಟ್ಟಿಯಲ್ಲಿ
ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಅರವಿಂದ ಲಿಂಬಾವಳಿ, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಬಿ.ಶ್ರೀ ರಾಮುಲು, ಉಮೇಶ್ ಕತ್ತಿ, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಬೈರತಿ‌ ಬಸವರಾಜ, ಮುರುಗೇಶ್ ನಿರಾಣಿ, ಶಿವರಾಂ ಹೆಬ್ಬಾರ್, ಶಶಿಕಲಾ ಜೊಲ್ಲೆ, ಕೆಸಿ ನಾರಾಯಣ್ ಗೌಡ, ಸುನೀಲ್ ಕುಮಾರ್, ಅರಗ ಜ್ಞಾನೇಂದ್ರ, ಗೋವಿಂದ ಕಾರಜೋಳ, ಮುನಿರತ್ನ, ಎಂ.ಟಿ.ಬಿ ನಾಗರಾಜ್, ಗೋಪಾಲಯ್ಯ, ಮಾಧುಸ್ವಾಮಿ, ಹಾಲಪ್ಪ ಆಚಾರ್, ಶಂಕರ್ ಪಾಟೀಲ್ ಮುನೇನಕೊಪ್ಪ, ಕೋಟಾ ಶ್ರೀನಿವಾಸ ಪೂಜಾರಿ, ಪ್ರಭು ಚೌವ್ಹಾಣ್, ವಿ. ಸೋಮಣ್ಣ, ಎಸ್ ಅಂಗಾರ, ಆನಂದ್ ಸಿಂಗ್, ಸಿ ಸಿ‌ ಪಾಟೀಲ್, ಬಿ.ಸಿ. ನಾಗೇಶ್ ಇದ್ದಾರೆ.

ಹಳೆಯ ಒಟ್ಟು ಏಳು ಮಂದಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಆರ್.ಶಂಕರ್, ಸಿ.ಪಿ.ಯೋಗೇಶ್ವರ್, ಅರವಿಂದ್ ಲಿಂಬಾವಳಿ, ಶ್ರೀಮಂತ ಪಾಟೀಲ್, ಸುರೇಶ್ ಕುಮಾರ್, ಜಗದೀಶ್ ಶೆಟ್ಟರ್ ಮತ್ತು ಲಕ್ಷಣ ಸವದಿಗೆ ಈ ಬಾರಿ ಮಂತ್ರಿ ಸ್ಥಾನವಿಲ್ಲ

ಇತ್ತೀಚಿನ ಸುದ್ದಿ

ಜಾಹೀರಾತು