4:28 PM Sunday21 - September 2025
ಬ್ರೇಕಿಂಗ್ ನ್ಯೂಸ್
ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ…

ಇತ್ತೀಚಿನ ಸುದ್ದಿ

ಬೊಮ್ಮಾಯಿ ಸಂಪುಟಕ್ಕೆ ಮೇಜರ್ ಸರ್ಜರಿ: 2-3 ದಿನಗಳಲ್ಲಿ ಸಿಎಂ ದೆಹಲಿಗೆ; ಯಾರು ಯಾರು ಆಗುತ್ತಾರೆ ಹೊಸ ಮಂತ್ರಿಗಳು?

03/04/2022, 22:09

ರಾಜೀವಿಸುತ ಬೆಂಗಳೂರು
info.reporterkarnataka@gmail.com

ಮುಂಬರುವ ವಿಧಾನಸಭೆ ಚುನಾವಣೆಗೆ ಕಮಲ ಪಾಳಯದಲ್ಲಿ ಈಗಿಂದೀಗಲೇ ಸಿದ್ಧತೆ ಆರಂಭವಾಗಿದೆ. ಇದರ ಭಾಗವಾಗಿ ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆ ನಡೆಯಲಿದೆ. ಈ ನಿಟ್ಟಿನಲ್ಲಿ ಮುಂದಿನ 2-3 ದಿನಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿ ಸಚಿವರ ಪಟ್ಟಿ ಅಂತಿಮಗೊಳಿಸಲಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಹಿಂದೆಯಷ್ಟೇ ರಾಜ್ಯಕ್ಕೆ ಭೇಟಿ ಕೊಟ್ಟು ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ. ಆರೆಸ್ಸೆಸ್ ನಡೆಸಿದ ಆಂತರಿಕ ಸಮೀಕ್ಷೆ ಪ್ರಕಾರ ಅವಧಿಗೆ ಮುನ್ನ ಚುನಾವಣೆಗೆ ಹೋದರೆ ಬಿಜೆಪಿ ಗೆಲುವು ಕಷ್ಟ ಎಂಬ ವರದಿಯ ಹಿನ್ನೆಲೆಯಲ್ಲಿ ಮುಂದಿನ ಏಪ್ರಿಲ್, ಮೇ ತಿಂಗಳಲ್ಲಿ ಚುನಾವಣೆ ನಡೆಸುವ ಸಾಧ್ಯತೆಗಳಿವೆ. ಅಲ್ಲಿಯ ವರೆಗೆ ಪಕ್ಷವನ್ನು ಪುನರ್ ಸಂಘಟಿಸಲು ಅಮಿತ್ ಶಾ ಸೂಚನೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.

ಬೊಮ್ಮಾಯಿ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯಲಿದೆ. ಪಕ್ಷ ಸಂಘಟನೆಯಲ್ಲಿ ಕೈಜೋಡಿಸದ ಸಚಿವರನ್ನು ಕೈಬಿಟ್ಟು ಹೊಸ ಮುಖಗಳಿಗೆ ಮಣೆ ಹಾಕಲು ಅಮಿತ್ ಶಾ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನದಲ್ಲಿ ಜನತಾ ದಳದ ಭದ್ರಕೋಟೆಗೆ ಲಗ್ಗೆ ಹಾಕಿದ ಬಿಜೆಪಿ ಶಾಸಕ ಪ್ರೀತಮ್ ಗೌಡ, ದಕ್ಷಿಣ ಕನ್ನಡದಿಂದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿವಾದಾತ್ಮಕ ಹೇಳಿಕೆಗಳಿಂದ ಪಕ್ಷಕ್ಕೆ ಆಗಾಗ ಕಿರಿಕಿರಿ ಉಂಟು ಮಾಡುತ್ತಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹೊಸಬರಿಗೆ ಅವಕಾಶ ಸಿಗಲಿದೆ.

ಅಮಿತ್ ಶಾ ಅಧ್ಯಕ್ಷತೆಯಲ್ಲಿ ಮೊನ್ನೆ ನಡೆದ ರಾಜ್ಯ ಕೋರ್‌ ಕಮಿಟಿ ಸಭೆಯಲ್ಲಿ ಸಚಿವ ಸಂಪುಟ ಪುನಾರಚನೆ, ನಿಗಮ ಮಂಡಳಿ ನೇಮಕದ ಬಗ್ಗೆ ಯಾವುದೇ ಚರ್ಚೆಗಳು ನಡೆಯಲಿಲ್ಲ. ಈ ಬಗ್ಗೆ ದೆಹಲಿಯಲ್ಲಿ ಚರ್ಚಿಸೋಣ ಎಂದು ಅಮಿತ್ ಶಾ ಮೊದಲೇ ಹೇಳಿದ್ದರಿಂದ ಕೋರ್ ಕಮಿಟಿ ಸಭೆಯಲ್ಲಿ ಯಾವುದೇ ಚರ್ಚೆಗಳು ನಡೆಯಲಿಲ್ಲ.

ಚುನಾವಣಾ ಸಿದ್ಧತೆಗಳ ಚರ್ಚೆಗಷ್ಟೇ ಕೋರ್ ಕಮಿಟಿ ಸಭೆ ಸೀಮಿತವಾಗಿತ್ತು. ಮುಂದಿನ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಸಂಪುಟ ಪುನಾರಚಿಸಿ 5-7 ಹಿರಿಯ ಸಚಿವರನ್ನು ಕೈ ಬಿಟ್ಟು, ಹೊಸ ಮುಖಗಳಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡುವ ಸಾಧ್ಯತೆಗಳಿವೆ.

ಇತ್ತೀಚಿನ ಸುದ್ದಿ

ಜಾಹೀರಾತು