2:06 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬೊಂಡ ಫ್ಯಾಕ್ಟರಿಯ ಎಳನೀರು ಕುಡಿದು 138 ಮಂದಿ ಅಸ್ವಸ್ಥಗೊಂಡ ಪ್ರಕರಣ: ಆರೋಗ್ಯ ಇಲಾಖೆಯ ಕೈಸೇರಿದ ಪ್ರಯೋಗಾಲಯ ವರದಿ

01/05/2024, 19:03

ಮಂಗಳೂರು(reporterkarnataka.com): ನಗರದ ಹೊರವಲಯದ ಅಡ್ಯಾರ್ ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿ ಹಲವರು ಅಸ್ವಸ್ಥಗೊಂಡ ಪ್ರಕರಣಕ್ಕೆ
ಸಂಬಂಧಿಸಿದಂತೆ ಪ್ರಯೋಗಾಲಯ ಪರೀಕ್ಷಾ ವರದಿ ಹೊರಬಂದಿದ್ದು, ಎಳನೀರು ಸಹಜವಾಗಿತ್ತು. ಕಲಬೆರಕೆಯಾಗಿಲ್ಲ ಎಂದು ವರದಿ ತಿಳಿಸಿದೆ.
ಈ ವರದಿ ಇದೀಗ ಜಿಲ್ಲಾ ಆರೋಗ್ಯ ಇಲಾಖೆಯ ಕೈಸೇರಿದೆ. ಎಳನೀರು ಸಹಜವಾಗಿತ್ತು. ಕಲಬೆರಕೆಯಾಗಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ ಎಂದು ತಿಳಿದು ಬಂದಿದೆ.
ಏಪ್ರಿಲ್ 9ರಂದು ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿ
138 ಮಂದಿ ವಾಂತಿಬೇಧಿಯಿಂದ ಅಸ್ವಸ್ಥಗೊಂಡಿದ್ದರು.
ಪ್ರಕರಣದ ಗಂಭೀರತೆಯನ್ನು ಅರಿತ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಆದರೆ
ಘಟನೆ ನಡೆದ ಎರಡು ದಿನಗಳ ಪ್ರಯೋಗಾಲಯ ಪರೀಕ್ಷೆಯ ವರದಿ ಎ.22ರಂದು ಆರೋಗ್ಯ ಇಲಾಖೆಯ ಕೈ ಸೇರಿದೆ.
ಜೊತೆಗೆ ಅಸ್ವಸ್ಥಗೊಂಡವರ ಮಲ ಮತ್ತು ರಕ್ತದ ಮಾದರಿ
ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿಯ
ಪ್ರಕಾರ ಕೆಲವರ ದೇಹದಲ್ಲಿ ಇಕೊಲೈ ಬ್ಯಾಕ್ಟಿರಿಯಾ
ಇರುವುದು ಪತ್ತೆಯಾಗಿದೆ. ಮನುಷ್ಯನ ಕರುಳಿನಲ್ಲಿ ಈ
ಬ್ಯಾಕ್ಟಿರಿಯಾ ಇರುತ್ತದೆ. ಆದರೆ ಅವುಗಳ ಪ್ರಮಾಣ
ಹೆಚ್ಚಾದರೆ, ಕೆಲವೊಮ್ಮೆ ಆರೋಗ್ಯ ಸಮಸ್ಯೆ ಬರುತ್ತದೆ
ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ
ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು