2:33 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಬೊಂದೆಲ್ ಚರ್ಚ್ ಶಾಲಾ ವಠಾರದಲ್ಲಿ 16ನೇ ಸ್ಟ್ಯಾನ್ ನೈಟ್ ಸಂಪನ್ನ; ಸಂಗೀತ ಪ್ರೇಮಿಗಳಿಗೆ ರಸದೌತಣ

05/02/2024, 20:00

ಮಂಗಳೂರು(reporterkarnataka.com): ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ಆಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಮತ್ತು ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಪ್ರಸ್ತುತಪಡಿಸಿದ 16ನೇ ಸ್ಟ್ಯಾನ್ ನೈಟ್ ಕಾರ್ಯಕ್ರಮ ಭಾನುವಾರ ನಗರದ ಬೊಂದೆಲ್ ಶಾಲಾ ವಠಾರದಲ್ಲಿ ನಡೆಯಿತು.
ವೇದಿಕೆಯಲ್ಲಿ ಗಣ್ಯ ವ್ಯಕ್ತಿಗಳಾದ ವ| ಫಾ ಆಂಡ್ರ್ಯೂ ಲಿಯೋ ಡಿಸೋಜ, ರಾಯ್ ಕಾಸ್ಟೆಲಿನೊ” ಲುವಿ ಪಿಂಟೊ, ಜೋಸೆಫ್ ಮಾಥಾಯಸ್, ಆಲ್ವಿನ್ ರೊಡ್ರಿಗ್ಸ್” ಸ್ಟ್ಯಾನಿ ಮೆಂಡೊನ್ಸಾ, ಆಲ್ಫ್ರೆಡ್ ಬೆನ್ನಿಸ್ , ರವಿ ಪಿಂಟೊ, ಸಂತೋಷ್ ಸಿಕ್ವೆರಾ, ಆಂಡ್ರಿಯಾ ಸಿಕ್ವೆರಾ, ಡಾ ಪ್ರೀತಿ ಡಿಸೋಜ, ಜೊನ್ ಡಿ ಸಿಲ್ವಾ , “ಫೆಲಿಕ್ಸ್” ಮೊರಾಸ್ ಉಪಸ್ಥಿತರಿದ್ದರು.
ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ರೂ ಐದು ಲಕ್ಷ ಚೆಕ್ , ಆಲ್ಫ್ರೆಡ್ ಬೆನ್ನಿಸ್ ಹಾಗೂ ಸ್ಟ್ಯಾನಿ ಮೆಂಡೊನ್ಸಾ ವ| ಫಾ ಆಂಡ್ರ್ಯೂ ಲಿಯೋ ಡಿಸೋಜರವರಿಗೆ ಹಸ್ತಾಂತರ ಮಾಡಿದರು.
ಸಂಜೆ ಗಂಟೆ. 6.೦೦ರಿಂದ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಮಂಗಳೂರಿನ ಹೆಸರಾಂತ ಗಾಯಕ-ಗಾಯಕಿರಿಂದ ಸಂಗೀತ ರಸಮಂಜರಿ, ಜೊಸ್ವಿನ್ ಪಪ್ವಾನರಿಂದ ಸಂಗೀತ , ಮೆಮರಿ ಮಂಗಳೂರು ಕಲಾವಿದರಿಂದ ಹಾಸ್ಯ ಕಾರ್ಯಕ್ರಮ, ಅರ್ಬನ್ ಗ್ರೂವ್ ಅವರಿಂದ ನೃತ್ಯ . ಒಂದೇ ವೇದಿಕೆಯಲ್ಲಿ ಪ್ರೇಕ್ಷಕರಿಗೆ ವಿವಿಧ ಮನೋರಂಜನೆಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು . ಈ ಕಾರ್ಯಕ್ರಮವನ್ನು ಕೊಂಕಣಿ ಭಾಷಿಕರ ಹೆಸರಾಂತ ಕಾರ್ಯನಿರ್ವಾಹಕ ಲೆಸ್ಲಿ ರೇಗೊ ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಕ್ರಮವು ಉಚಿತ ಪ್ರವೇಶವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು