9:05 PM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಬೊಂದೆಲ್ ಲಾಫ್ಟರ್ ಕ್ಲಬ್‌: ವಿದ್ಯಾರ್ಥಿಗಳ ಮಾನಸಿಕ ಒತ್ತಡ ನಿವಾರಿಸಲು 2 ದಿನಗಳ ನಗೆ ಸೆಶನ್‌

05/06/2023, 21:39

ಮಂಗಳೂರು(reporterkarnataka.com):ನಗರದ ಬೊಂದೆಲ್ ಜಂಕ್ಷನ್‌ನಲ್ಲಿರುವ ಜಾನ್ಲಿನ್ ಕಾಟೇಜ್‌ನಲ್ಲಿ ಕಳೆದ 20 ವರುಷಗಳಿಂದ ಲಾಫ್ಟರ್ ಕ್ಲಬ್‌ಗಳನ್ನು ನಡೆಸುತ್ತಿರುವ ಬೊಂದೆಲ್ ಲಾಫ್ಟರ್ ಕ್ಲಬ್ ಇವರು ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ ಇದರ 100 ವಿದ್ಯಾರ್ಥಿಗಳಿಗೆ ಜೂನ್ 3 ಮತ್ತು 5ರಂದು ಲಾಫ್ಟರ್ ಸೆಶನ್‌ಗಳನ್ನು ನಡೆಸಿತು.


ಬೊಂದೆಲ್ ಕ್ಲಬ್ಬಿನ ಸಂಸ್ಥಾಪಕ ಜಾನ್ ಬಿ. ಮೊಂತೇರೊ ಮತ್ತು ಕ್ಲಬ್ಬಿನ ಹಿರಿಯ ಸದಸ್ಯರಾದ ನಿವೃತ್ತ ಪ್ರಾಧ್ಯಾಪಕ ಖಾಲಿದ್ ಅನ್ಸಾರಿ ಮತ್ತು ಬೊನವೆಂಚರ್ ಡಿಸೋಜಾ ಅವರು ವಿದ್ಯಾರ್ಥಿ ಮತ್ತು ಅಧ್ಯಾಪಕರಿಗೆ ಮಾರ್ಗದರ್ಶನ ನೀಡಿದರು. ಇದಕ್ಕೂ ಮುನ್ನ ಎಪ್ರಿಲ್ 4ರಂದು ಜಾನ್ ಮೊಂತೇರೊ ಮತ್ತು ಪ್ರೊ. ಖಾಲಿದ್ ಅನ್ಸಾರಿ ಅವರನ್ನು ಬಲ್ಮಠ ಎ.ಜೆ. ಟರ‍್ಸ್ನ ಕಾಲೇಜು ಆವರಣದಲ್ಲಿ ಬೋಧಕರಿಗಾಗಿ ನಗೆ ಅಧಿವೇಶನವನ್ನು ನಡೆಸಲು ಆಹ್ವಾನಿಸಲಾಗಿತ್ತು. ಪ್ರಾಂಶುಪಾಲೆ ಡಾ. ಲರಿಸ್ಸಾ ಮಾರ್ಥಾ ಸ್ಯಾಮ್ಸ್ ಅವರ ಮಾರ್ಗದರ್ಶನದಲ್ಲಿ ಮಾನಸಿಕ ಆರೋಗ್ಯ ವಿಭಾಗದ ಉಪನ್ಯಾಸಕಿ ಶ್ರೀರಂಜನಿ ಅವರು ಕಾರ್ಯಕ್ರಮವನ್ನು ಸಂಯೋಜಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು